ರಾಜ್ಯದಲ್ಲಿ ಎಚ್1ಎನ್1 ಉಲ್ಬಣ

ಬೆಂಗಳೂರು

        ರಾಜ್ಯದಲ್ಲಿ ಎಚ್1ಎನ್1 ಸಮಸ್ಯೆ ಉಲ್ಬಣಗೊಂಡಿದ್ದು, ಈವರೆಗೆ 15 ಮಂದಿ ಮೃತಪಟ್ಟಿದ್ದಾರೆ.ರಾಜಧಾನಿ ಬೆಂಗಳೂರಿನಲ್ಲಿ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದ್ದು, ಇಲ್ಲಿ 11 ಮಂದಿ ಅಸುನೀಗಿದ್ದಾರೆ. ಇದರಿಂದಾಗಿ ನಗರದಾದ್ಯಂತ ಕೆಟ್ಟೆಚ್ಚರ ವಹಿಸಲಾಗಿದೆ.

       ಬೆಂಗಳೂರಿನಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಎಚ್1ಎನ್1 ಪ್ರಕರಣಗಳು ಕಂಡು ಬಂದಿದ್ದು, ಈ ಸಂಬಂಧ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

       ಪ್ರತಿನಿತ್ಯ ರಾಜ್ಯದಲ್ಲಿ 40 ರಿಂದ 50 ಎಚ್1ಎನ್1 ಶಂಕಿತ ಪ್ರಕರಣಗಳು ವರದಿಯಾಗುತ್ತಿದ್ದು, ಸಕಾಲದಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಲಾಗಿದೆ.

       ಸೋಂಕು ಹರಡಂತೆ ಕ್ರಮಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ಜನಜಾಗೃತಿ ಮೂಡಿಸಲು ಗಮನ ಹರಿಸುವಂತೆ ವೈದ್ಯಕೀಯ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap