ಹಾಸನ :
ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ಪೋಸ್ಟ್ ಬಳಿ ಸಂಭವಿಸಿದೆ.
ಕಾರಿನಲ್ಲಿ ಧರ್ಮಸ್ಥಳಕ್ಕೆ ಐವರು ಸ್ನೇಹಿತರು ಹೊರಟಿದ್ದರು. ದಾರಿ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರಿನ ಗಾಜು ಪುಡಿ ಪುಡಿಯಾಗಿದ್ದು ಕಾರು ನಜ್ಜುಗುಜ್ಜಾಗಿದೆ.
ಘಟನೆಯಲ್ಲಿ ಬೆಂಗಳೂರು ಮೂಲದ ದೇವರಾಜು(38) ಮೃತಪಟ್ಟಿದ್ದಾರೆ. ಮಧುಕಿರಣ್, ಶ್ರೀನಿಧಿ, ಕೇಶವಯ್ಯ, ನಾಗರಾಜು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಾಳುಗಳಾಗಿವೆ. ಇನ್ನು ಕಾರಿನಲ್ಲಿದ್ದವರನ್ನು ಹೊರ ತೆಗೆಯಲು ಸ್ಥಳೀಯರು ಹರ ಸಾಹಸ ಪಟ್ಟಿದ್ದಾರೆ ಎನ್ನಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಚನ್ನರಾಯಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/01/Acc-3.jpg)