ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ತಡೆಯುವುದಕ್ಕಾಗಿ ಇಡೀ ರಾಜ್ಯವನ್ನೇ ಲಾಕ್ ಮಾಡಿ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕೊರೋನ ವೈರಸ್ ತಡೆಯಲು ರಾಜ್ಯ ಸರ್ಕಾರವು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೆ ತಿಂಗಳು 14ರ ರಾತ್ರಿ 8 ಗಂಟೆ ಯಿಂದ ಲಾಕ್ ಡೌನ್ ಜಾರಿ ಮಾಡಿರುವುದು ಸ್ವಾಗತಾರ್ಹ. ಇದರ ಜೊತೆಗೆ ರಾಜ್ಯಾದ್ಯಂತ ಲಾಕ್ ಡೌನ್ ಜಾರಿ ಮಾಡುವಂತೆ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಸದ್ಯ ಹೊರಗೆ ಬರುವಾಗ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮುಖ್ಯವಾದ ಕೆಲಸ ಇದ್ದರೆ ಮಾತ್ರ ಹೊರ ಬನ್ನಿ . ಅನೇಕ ನಾಯಕರು ಸರ್ಕಾರದ ಬಗ್ಗೆ ಅಪಾಧಿಸುತ್ತಿದ್ದಾರೆ. ಅದೇನೇ ಇದ್ದರೂ ಅಧಿವೇಶನದಲ್ಲಿ ಚರ್ಚೆ ಮಾಡಲಿ ಎಂದು ಅವರು ಸಲಹೆ ನೀಡಿದ್ದಾರೆ.
ರಾಜ್ಯದ ಜನತೆಯ ಜೊತೆಗೆ ನಮ್ಮ ಇಡಿ ದೇಶದ ಜನತೆಗೆ ನಾನು ಮನವಿ ಮಾಡಿಕೊಳ್ಳುತ್ತೇನೆ. ನಮಗೆ ಆರೋಗ್ಯವೇ ಭಾಗ್ಯ. ಆದ್ದರಿಂದ ದಯವಿಟ್ಟು ಮನೆಯಿಂದ ಹೊರ ಹೋಗಬೇಕಾದರೆ ಮಾಸ್ಕ್ ಧರಿಸಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಏನೇ ಮುಟ್ಟಬೇಕಾದರು ಸ್ಯಾನಿಟೈಸರ್ ನಿಂದ ಕೈ ಅನ್ನು ಸ್ವಚ್ಛಗೊಳಿಸಿ ನಂತರ ಮುಟ್ಟಿ. ಮುಖ್ಯವಾದ ಕೆಲಸ ಕಾರ್ಯಗಳು ಇದ್ದರೆ ಮಾತ್ರ ಮನೆಯಿಂದ ಹೊರ ಬನ್ನಿ ಎಂದು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
