ರಾಮನಗರ:
‘ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್ ವರಿಷ್ಠರೇ ಹೊರತು ಸಿದ್ದರಾಮಯ್ಯ ಅಲ್ಲ’ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮುಖ್ಯಮಂತ್ರಿ ಮಾಡಲು ಸಿದ್ದರಾಮಯ್ಯ ಅವರಿಗೆ ಇಷ್ಟ ಇರಲಿಲ್ಲ. ಆದರೆ ಬಿಜೆಪಿ ಪಕ್ಷವನ್ನು ದೂರ ಇಡಲು ಕಾಂಗ್ರೆಸ್ ವರಿಷ್ಠರು ನನ್ನನ್ನು ಸಿಎಂ ಮಾಡಲು ತೀರ್ಮಾನ ತೆಗೆದುಕೊಂಡರು. ಇದು ಸಿದ್ದರಾಮಯ್ಯ ಅವರಿಗೆ ಒಪ್ಪಿಗೆಯಾಗಲಿಲ್ಲ. ಮೈತ್ರಿ ಸರ್ಕಾರ ಇದ್ದಾಗಲು ಸಹಾ ಪಾರ್ಲಿಮೆಂಟ್ ಚುನಾವಣೆ ನಂತರ ರಾಜ್ಯದಲ್ಲಿ ಸರ್ಕಾರ ಇರುವುದಿಲ್ಲ ಎಂದು ಅವರೆ ಆಪ್ತರ ಬಳಿ ಹೇಳಿಕೊಂಡಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/05/kumaraswamysiddaramaiah-11-.gif)