ಮಂಡ್ಯ:
ತಾಂತ್ರಿಕ ದೋಷ ಹಿನ್ನೆಲೆ ಸೇನಾ ಹೆಲಿಕ್ಯಾಪ್ಟರ್ ತುರ್ತು ಭೂ ಸ್ಪರ್ಶವಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಚೆನ್ನಹಳ್ಳಿ ಬಳಿ ನಡೆದಿದೆ.
ಬೆಂಗಳೂರಿನ ಯಲಹಂಕ ವಾಯು ನೆಲೆಯಿಂದ ಮೈಸೂರಿನ ಏರ್ ಷೋಗಾಗಿ ತೆರಳುತ್ತಿದ್ದ ಸೇನಾ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದ್ದು, ಹೈಡ್ರಾಲಿಕ್ ವ್ಯವಸ್ಥೆ ಕೈಕೊಟ್ಟಿದ್ದರುಣದ ತುರ್ತು ಭೂಸ್ಪರ್ಶ ಮಾಡಿ ಫೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೂ ಸ್ಪರ್ಶವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಭದ್ರತೆ ಒದಗಿಸಿದ್ದಾರೆ. ಇನ್ನು ಜನರು ಹೆಲಿಕಾಪ್ಟರ್ ನೋಡಲು ಸ್ಥಳಕ್ಕೆ ಆಗಮಿಸುತ್ತಿದ್ದರು. ಜನರನ್ನು ನಿಯಂತ್ರಣ ಮಾಡುವುದಕ್ಕೆ ಪೊಲೀಸರು ಹರಸಾಹಸ ಪಟ್ಟರು.
![](https://prajapragathi.com/wp-content/uploads/2019/10/Mandya-helicopter.gif)