ಮೈಸೂರು:
ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸಂಶಯಾಸ್ಪದ ವಸ್ತು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮೈಸೂರಿನಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ.
ನಗರದಿಂದ ಹೊರಹೋಗುವ ಮತ್ತು ನಗರಕ್ಕೆ ಆಗಮಿಸುವ ಪ್ರತಿಯೊಂದು ರೈಲುಗಳನ್ನು ರೈಲ್ವೆ ಹಾಗೂ ನಗರ ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ತಪಾಸಣೆ ಮಾಡುತ್ತಿದ್ದಾರೆ. ಪ್ರವೇಶದ್ವಾರದಲ್ಲಿಯೇ ಪ್ರಯಾಣಿಕರ ಬ್ಯಾಗ್, ಲಗೇಜ್ಅನ್ನು ಕೂಲಂಕುಶವಾಗಿ ತಪಾಸಣೆ ಮಾಡಿಯೇ ಕಳುಹಿಸಲಾಗುತ್ತಿದೆ.
ಈ ಬಗ್ಗೆ ಡಿಸಿಪಿ ಮುತ್ತುರಾಜ್ ಮಾತನಾಡಿ, ಮೈಸೂರು ಪ್ರವಾಸಿ ತಾಣವಾಗಿರುವುದರಿಂದ ದೇಶಾದ್ಯಂತ ನಗರಕ್ಕೆ ಹೆಚ್ಚಿನ ಜನ ಆಗಮಿಸುತ್ತಾರೆ. ಬಸ್ ನಿಲ್ದಾಣ, ರೈಲು ನಿಲ್ದಾಣ, ಅರಮನೆ, ಜೂ, ಚಾಮುಂಡಿ ಬೆಟ್ಟ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಹಾಗಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
