‘ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹ’ – ಹೈಕೋರ್ಟ್ ಆದೇಶ!!

ಬೆಂಗಳೂರು :  

      ಹೆಚ್.ವಿಶ್ವನಾಥ್ 2021 ರವರೆಗೆ ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. 

     ಹೆಚ್ ವಿಶ್ವನಾಥ್, ಆರ್. ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗೀಯ ಪೀಠವು, ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ. ಅನರ್ಹರಾಗಿ, ಸೋತು ನಾಮ ನಿರ್ದೇಶನಗೊಂಡಿದ್ದಾರೆ. ವಿಶ್ವನಾಥ್ ಅನರ್ಹತೆಯನ್ನು ಸಿಎಂ ಪರಿಗಣಿಸಬೇಕು. ಕಲಂ 164(1ಬಿ), 361 ಬಿ ಅಡಿ ವಿಶ್ವನಾಥ್ ಅನರ್ಹರು. ಹೀಗಾಗಿ 2021ರವರೆಗೆ ಸಚಿವರಾಗಲು ಅರ್ಹರಲ್ಲ ಎಂಬುದಾಗಿ ಮಹತ್ವದ ಆದೇಶ ನೀಡಿದೆ.

      ಇನ್ನೂ ಆರ್.ಶಂಕರ್, ಎಂ.ಟಿ.ಬಿ ನಾಗರಾಜ್ ಅವರು ಚುನಾವಣೆಯಲ್ಲಿ ಆಯ್ಕೆಗೊಂಡು ಎಂ.ಎಲ್ ಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಸಚಿವರಾಗಲು ಯಾವುದೇ ಅಡೆತಡೆಯಿಲ್ಲ.  

      ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವಾನಾಥ್ ಗೆ ಬಿಗ್ ಶಾಕ್ ನೀಡಿದೆ. ಅಲ್ಲದೇ ಆರ್ ಶಂಕರ್, ಎಂ.ಟಿ.ಬಿ.ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಬಿಗ್ ರಿಲೀಫ್ ನೀಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap