ಮೈಸೂರು:
ರಸ್ತೆ ವಿಭಾಜಕಕ್ಕೆ ಕಾರು ಢಿಕ್ಕಿಯಾಗಿ ಸಂಭವಿಸಿದ ಭೀಕರ ಅವಘಡದಲ್ಲಿ ಹಿಂದಿ ಚಿತ್ರದ ಸ್ಟಂಟ್ ಮಾಸ್ಟರ್ ಮುನ್ನಾಭಾಯಿ (42) ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.
ಇವರ ಜೊತೆಗಿದ್ದ ಇಬ್ಬರು ಸ್ನೇಹಿತರಾದ ಅರುಣ್ ಕುಮಾರ್ ಮತ್ತು ಕಾರು ಚಾಲಕ ಉಮೇಶ್ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಹುಣಸೂರು ತಾಲೂಕಿನ ಯಶೋಧಪುರ ಗ್ರಾಮದ ಬಳಿ ರಸ್ತೆ ಬಳಿ ಈ ದುರ್ಘಟನೆ ನಡೆದಿದ್ದು, ಉದ್ಘರ್ಷ ಎಂಬ ಕನ್ನಡ ಚಲನಚಿತ್ರದ ಚಿತ್ರೀಕರಣದ ನಿಮಿತ್ತ ಇವರು ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಬೆಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದರು. ಮಹಮ್ಮದ್ ಅಸ್ಲಾಂ ಅವರ ಪುತ್ರರಾದ ಮುನ್ನಾಭಾಯಿ ಮುಂಬೈ ನಗರದ ನಿವಾಸಿಯಾಗಿದ್ದು, ಹಲವಾರು ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ