ಶಿವಮೊಗ್ಗ : ಭಾರೀ ಮಳೆ ; ಶಾಲಾ-ಕಾಲೇಜುಗಳಿಗೆ ರಜೆ!!

ಶಿವಮೊಗ್ಗ:

     ಜಿಲ್ಲೆಯಲ್ಲಿ ಇದೀಗ ಬಿಡುವು ಕೊಡದೆ ಮಳೆ‌ ಸುರಿಯುತ್ತಿದ್ದು, ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಇಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ.ಎ ದಯಾನಂದ ಆದೇಶ ಹೊರಡಿಸಿದ್ದಾರೆ.

     ಭಾರೀ ಮಳೆಯಿಂದಾಗಿ ಜಿಲ್ಲೆಯ ನದಿ‌ಹಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಶರಾವತಿ, ಮಾಲತಿ, ಕುಮದ್ವತಿ, ವರದಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ. ಭದ್ರಾ ಜಲಾಶಯದ ಒಳಹರಿವು 22 ಸಾವಿರ ಕ್ಯೂಸೆಕ್ ಗೆ ಏರಿಕೆಯಾಗಿದೆ. ತುಂಗಾ ಜಲಾಶಯಕ್ಕೆ 77ಸಾವಿರ ಕ್ಯೂಸೆಕ್ ನೀರು ಬರುತ್ತಿದ್ದು ಅಷ್ಟೆ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ದಂಡಾವತಿ ನದಿ ಸಹ ತುಂಬಿ ಹರಿಯುತ್ತಿದೆ.

       ರಸ್ತೆಗಳಲ್ಲಿ ಮರಗಳು ಧರೆಗೆ ಉರುಳುತ್ತಿದ್ದು, ಕೆಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಎಲ್ಲಾ ತಾಲೂಕು ಕಚೇರಿಗಳಲ್ಲಿ 24/7 ಸಹಾಯವಾಣಿ ಕೇಂದ್ರವನ್ನು ಆರಂಭಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap