ಹುಬ್ಬಳ್ಳಿ:
ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸ್ಟೇಷನ್ ಮಾಸ್ಟರ್ ಮತ್ತು RPF ಎಎಸ್ಐ ರನ್ನು ಅಮಾನತು ಮಾಡಲಾಗಿದೆ.
ಹುಬ್ಬಳ್ಳಿಯ ರೈಲ್ವೆೇ ನಿಲ್ದಾಣದಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ರೈಲ್ವೆೇ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ ರೈಲ್ವೆೇ ನಿಲ್ದಾಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ನಡೆದ ಘಟನೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದೇನೆ. ಘಟನೆ ಕುರಿತಂತೆ ಸ್ಟೇಶನ್ ಮಾಸ್ಟರ್ ವರುಣ ಕುಮಾರ, ಆರ್ ಪಿಎಫ್ ಎಎಸ್ ಐ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ. ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ. ಮೂರು ದಿನಗಳಲ್ಲಿ ಈ ತನಿಖೆ ಮುಗಿಸುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಇತ್ತೀಚೆಗೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದ ಬಾಕ್ಸ್ ಸ್ಪೋಟಗೊಂಡ ಘಟನೆ ನಡೆದಿತ್ತು. ಇಂದು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ರೈಲ್ವೆ ರಕ್ಷಣಾ ಪಡೆಯ ಅಧಿಕಾರಿಗಳಿಂದ ಘಟನೆಯ ಕುರಿತು ಸಂಪೂರ್ಣ ಮಾಹಿತಿ ಪಡೆದೆನು.#Hubli #RailwayStation pic.twitter.com/f9INEoLul7
— Suresh Angadi (@SureshAngadi_) October 26, 2019
ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು. ವಿಮಾನ ನಿಲ್ದಾಣದಲ್ಲಿರುವ ಮಾದರಿಯಂತೆ ರೈಲ್ವೆ ನಿಲ್ದಾಣದಲ್ಲಿಯು ವಸ್ತುಗಳ ತಪಾಸಣೆಯ ಸ್ಕ್ಯಾನಿಂಗ್ ಮಶಿನ್ ಗಳನ್ನು ಅಳವಡಿಸಲಾಗುವುದು. ರೈಲ್ವೆ ನಿಲ್ದಾಣದಲ್ಲಿ ಅನಧಿಕೃತ ವ್ಯಕ್ತಿಗಳು ಕಂಡುಬಂದಲ್ಲಿ ಅಂಥವರ ಮೇಲೆ ಕ್ರಮಕ್ಕೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ