ಹೈದರಾಬಾದ್:
ಪಶುವೈದ್ಯೆ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿ ಹತ್ಯೆ ಪ್ರಕರಣದಲ್ಲಿ ಎನ್’ಕೌಂಟರ್ ನಲ್ಲಿ ಹತ್ಯೆಯಾದ ಆರೋಪಿಗಳ ಮೃತದೇಹಗಳ ಮರಣೋತ್ತರ ಪರೀಕ್ಷೆ ಅಂತ್ಯಗೊಂಡಿದ್ದು, ಆರೋಪಿಗಳ ಅಂತ್ಯಸಂಸ್ಕಾರ ನಡೆಸದಂತೆ ತೆಲಂಗಾಣ ಹೈಕೋರ್ಟ್ ಸೂಚನೆ ನೀಡಿದೆ.
ಎನ್ ಕೌಂಟರ್ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. ವಿಚಾರಣೆ ನೆಪದಲ್ಲಿ ನಾಲ್ವರನ್ನು ಎನ್ ಕೌಂಟರ್ ಮಾಡಿದ ಪೊಲೀಸರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಸಿಜೆಐ, ಎನ್.ಹೆಚ್.ಆರ್.ಸಿ., ತೆಲಂಗಾಣ ಹೈಕೋರ್ಟ್ ಮತ್ತು ಡಿಜಿಪಿಗೆ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಪೊಲೀಸರ ವಿರುದ್ಧ ಕೇಸ್ ದಾಖಲಿಸಲು ಮುಂಬೈ ಮೂಲದ ವಕೀಲರು ಆಗ್ರಹಿಸಿ ಮನವಿ ಅರ್ಜಿ ಸಲ್ಲಿಸಿದ್ದಾರೆ. ಡಿಸೆಂಬರ್ 9ರ ರಾತ್ರಿ 8 ಗಂಟೆವರೆಗೂ ಎನ್’ಕೌಂಟರ್’ನಲ್ಲಿ ಹತ್ಯೆಯಾಗಿರುವ ಆರೋಪಿಗಳು, ಸಂತ್ರಸ್ತರು ಹಾಗೂ ಶಂಕಿತರ ಮೃತದೇಹಗಳನ್ನು ಸಂರಕ್ಷಿಸಿ ಎಂದು ಸರ್ಕಾರಕ್ಕೆ ನ್ಯಾಯಪೀಠ ಆದೇಶಿಸಿದೆ.
ದಿಶಾ ಹತ್ಯೆ ಪ್ರಕರಣದ ಆರೋಪಿಗಳ ಎನ್ ಕೌಂಟರ್ ಕುರಿತಾದ ಸಂಪೂರ್ಣ ವರದಿ ನೀಡುವಂತೆ ಕೇಂದ್ರ ಸರ್ಕಾರ ತೆಲಂಗಾಣ ಸರ್ಕಾರಕ್ಕೆ ಸೂಚನೆ ನೀಡಿದೆ.
ನವೆಂಬರ್ 29 ರಂದು ಹತ್ಯೆಯಾಗಿರುವ ಕಾಮುಕರು ಪ್ರಿಯಾಂಕಾ ರೆಡ್ಡಿ ಮೇಲೆ ಅಟ್ಟಹಾಸ ಮೆರೆದಿದ್ದರು. ಪ್ರಿಯಾಂಕಾ ರೆಡ್ಡಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದ ನಾಲ್ವರು ಕಾಮುಕರು, ನಂತರ ಆಕೆಯನ್ನು ಹತ್ಯೆ ಮಾಡಿ, ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು. ಪ್ರಕರಣ ದೇಶದಾದ್ಯಂತ ಭಾರೀ ಸದ್ದು ಮಾಡಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/12/priyanka-reddy.jpg)