ರಾಯಚೂರು :
ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚು ಪ್ರಮಾಣದ ನೀರು ಬಿಡುತ್ತಿರುವುದರಿಂದ ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ.
ನಾರಾಯಣಪುರ ಜಲಾಶಯದಿಂದ 2.20 ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಿರುವುದರಿಂದ ರಾಯಚೂರಿನ ದೇವದುರ್ಗದ ಕೊಪ್ಪರ ಲಕ್ಷ್ಮೀ ನರಸಿಂಹ ದೇವಾಲಯ ಭಾಗಶಃ ಜಲಾವೃತವಾಗಿದೆ.
ಸಂಜೆಯ ವೇಳೆಗೆ ದೇವಾಲಯ ಸಂಪೂರ್ಣ ಜಲಾವೃತಯಾಗುವ ಭೀತಿ ಎದುರಾಗಿದೆ. ಹೀಗಾಗಿ ದೇವಸ್ಥಾನದ ಸುತ್ತಮುತ್ತ ವಾಸಿಸುತ್ತಿರುವ ಜನರಿಗೆ ಸದ್ಯ ಆತಂಕ ಎದುರಾಗಿದೆ.
ಇನ್ನು ಈಗಾಗಲೇ ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ. ಸೇತುವೆ ಮೇಲೆ ಯಾರು ಓಡಾಟದಂತೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ.
ಲಿಂಗಸುಗೂರಿನ ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು 6 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಹಾಗಾಗಿ ಜನರಲ್ಲಿಆತಂಕ ಮನೆಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
