ಬೆಂಗಳೂರು:
ರಮೇಶ್ ಜಾರಕಿಹೊಳಿ ಎಲ್ಲಿದ್ದಾರೆ ಎಂಬುದನ್ನ ಯಡಿಯೂರಪ್ಪನವರನ್ನು ಕೇಳಿ, ಹೇಳುತ್ತಾರೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾರ ವಕ್ತಾರ ಅಲ್ಲ ಅವರು ಎಲ್ಲಿದ್ದಾರೆ ಎಂದು ತಿಳಿಯಬೇಕಿದ್ದರೆ ಯಡಿಯೂರಪ್ಪ ಅವರನ್ನು ಕೇಳಿ ನನ್ನನ್ಯಾಕೆ ಕೇಳ್ತೀರಾ ಎಂದು ಸಚಿವರು ಗರಂ ಆಗಿ ಹೇಳಿಕೆ ನೀಡಿದ್ದಾರೆ.
ನಿನ್ನೆ ಆಪರೇಷನ್ ಕಮಲ ಮಾಡುವುದಿಲ್ಲ ಎಂದು ಬಿ.ಎಸ್.ವೈ ಹೇಳುತ್ತಾರೆ. ಆದರೆ, ಶ್ರೀರಾಮುಲು, ಶೆಟ್ಟರ್, ಉಮೇಶ್ ಕತ್ತಿ ಏನು ಹೇಳಿದ್ದಾರೆ? ಪೂರಕವಾಗಿ ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ರಾಜಕಾರಣ ಶಾಶ್ವತ ಅಲ್ಲ, ನಾವೇನು ಗೂಟ ಹೊಡ್ಕೊಂಡು ಕುಳಿತುಕೊಳ್ಳುವುದಿಲ್ಲ. ಇಲ್ಲಿ ಯಾರೂ ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ಎಂದು ಆಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/01/bsy-jarakiholi.gif)