ಬೆಂಗಳೂರು :
ಜಾಮೀನು ಪಡೆದು ಇಡಿ ಬಂಧನದಿಂದ ಮುಕ್ತರಾಗಿ ಬಂದಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಮೇಲೆ ನೋಟಿಸ್ ನೀಡಲಾಗಿದೆ.
ಡಿಕೆಶಿವಕುಮಾರ್ ಅವರ ವಿರುದ್ಧ ಐಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಐಟಿ ಇಲಾಖೆ, ಡಿಕೆಶಿ , ಕುಟುಂಬಸ್ಥರಿಗೆ ನೋಟಿಸ್ ಮೇಲೆ ನೋಟಿಸ್ ನೀಡುತ್ತಿದೆ ಎಂಬುದಾಗಿ ತಿಳಿದುಬಂದಿದೆ.
ಡಿಸೆಂಬರ್ 2ರ ಸೋಮವಾರ ಆದಾಯ ತೆರಿಗೆ ಇಲಾಖೆ ಕಚೇರಿಗೆ ವಿಚಾರಣೆಗೆ ಬರಬೇಕು ಎಂದು ನೋಟಿಸ್ನಲ್ಲಿ ಸೂಚನೆ ನೀಡಲಾಗಿದ್ದು, ಬೆಳಗಾವಿಗೆ ಉಪ ಚುನಾವಣಾ ಪ್ರಚಾರಕ್ಕೆ ಹೊರಟಿದ್ದ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಡಿಕೆಶಿ ಚುನಾವಣೆ ಹಿನ್ನಲೆಯಲ್ಲಿ ಡಿಕೆಶಿ ವಿಚಾರಣೆಗೆ ಹಾಜರಾಗಲು ಬೇರೆ ದಿನಾಂಕ ನಿಗದಿಗೆ ಮನವಿ ಮಾಡಿದರೂ ಕೂಡ ವಿಚಾರಣೆಗೆ ಹಾಜರಾಗುವಂತೆ ಐಟಿ ಇಲಾಖೆ ದಿನಬಿಟ್ಟು ದಿನ ನೋಟೀಸ್ ನೀಡಿದೆ ಎನ್ನಲಾಗಿದೆ. ಅವರ ಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯ, ತಾಯಿಗೆ ಐಟಿ ಇಲಾಖೆಯಿಂದ ಒಂದೇ ತಿಂಗಳಲ್ಲಿ 30 ನೋಟಿಸ್ ನೀಡಲಾಗಿದೆ. ಹೀಗಾಗಿ ಇಂದು ಡಿಕೆಶಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/10/dk-shiva-1.gif)