ಬೆಂಗಳೂರು :
ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಧಮ್ ಇದ್ದರೆ ವಿದೇಶಕ್ಕೆ ಆಗುತ್ತಿರುವ ಗೋಮಾಂಸ ರಫ್ತು ನಿಲ್ಲಿಸಲಿ ಎಂದು ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ.
ನಿನ್ನೆಯಷ್ಟೇ ಈಶ್ವರಪ್ಪನವರು ಬಿಜೆಪಿಗೆ ಮತ ಹಾಕದವರು ಪಾಕ್ ಪರ ಇರುತ್ತಾರೆ ಎಂದು ಹೇಳಿಕೆ ನೀಡಿದ್ದರು ಇದಕ್ಕೆ ಇಂದು ಉಗ್ರಪ್ಪ ತಿರುಗೇಟು ನೀಡಿದ್ದಾರೆ.
ಈಶ್ವರಪ್ಪ ಅವರಿಗೆ ಉಡಾಫೆ ಮಾತುಗಳನ್ನು ಆಡುವುದು ಸುಲಭ. ಅವರಿಗೆ ಪ್ರಾಮಾಣಿಕತೆ, ಧಮ್ಮು, ತಾಕತ್ತು ಇದ್ದರೆ ದೇಶದಿಂದ ವಿದೇಶಕ್ಕೆ ಆಗುತ್ತಿರುವ ಗೋಮಾಂಸ ರಫ್ತು ನಿಲ್ಲಿಸಲಿ. ಗುಜರಾತ್ ನಲ್ಲಿರುವ ಗೋ ಮಾಂಸ ಕಾರ್ಖಾನೆಗಳನ್ನು ಬಂದ್ ಮಾಡಿಸಲಿ ಎಂದು ಸವಾಲ್ ಎಸೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/09/eshwarappa-ugrappa.gif)