ಜೋಧಪುರ್:
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್ 370 ರದ್ದುಗೊಳಿಸುತ್ತಿದ್ದಂತೆ ಭಾರತದ ವಿರುದ್ಧ ಆಕ್ರೋಶಗೊಂಡು ಸಂಜೋತಾ ರೈಲು ಸೇವೆ ಸ್ಥಗಿತಗೊಳಿಸಿದ್ದ ಪಾಕ್ಗೆ ಇದೀಗ ಭಾರತ ಸಖತ್ ಆಗಿ ತಿರುಗೇಟು ನೀಡಿದೆ.
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಭಾರತದ ನಿರ್ಧಾರ ಪಾಕಿಸ್ತಾನವನ್ನು ವಿಚಲಿತಗೊಳಿಸಿದ್ದು, ಎರಡೂ ರಾಷ್ಟ್ರಗಳ ಸಂಬಂಧಗಳಲ್ಲಿ ಮತ್ತಷ್ಟು ಬಿರುಕು ಕಾಣಿಸಿಕೊಂಡಿದೆ. ಪಾಕಿಸ್ತಾನ ಜೋಧ್ಪುರ – ಕರಾಚಿಯನ್ನು ಸಂಪರ್ಕಿಸುವ ಥಾರ್ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ರದ್ದುಗೊಳಿಸಿದ್ದರೆ, ಭಾರತ ಈಗ ಜೋಧ್ಪುರ-ಮುನಾಬಾವೊ ಸಂಪರ್ಕಿಸುವ ಥಾರ್ ಲಿಂಕ್ ಎಕ್ಸ್ಪ್ರೆಸ್ ಸಂಚಾರಕ್ಕೆ ಬ್ರೇಕ್ ಹಾಕಿದೆ.
ಮುಂದಿನ ಆದೇಶದವರೆಗೆ, ‘ಭಗತ್ ಕಿ ಕೋಥಿ-ಮುನಾಬಾವೊ-ಭಗತ್ ಕಿ ಕೋಥಿ’ ಮತ್ತು ‘ಮುನಾಬಾವೊ- ಜೀರೋ ಪಾಯಿಂಟ್-ಮುನಾಬಾವೊ’ ಥಾರ್ ಎಕ್ಸ್ಪ್ರೆಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ವಾಯುವ್ಯ ರೈಲ್ವೆ ವಕ್ತಾರ ಅಭಯ್ ಶರ್ಮಾ ಅವರು ತಿಳಿಸಿದ್ದಾರೆ.
![](https://prajapragathi.com/wp-content/uploads/2019/08/loss-making-indian-railways.gif)