ಅಂತರ್ ಜಿಲ್ಲಾ ಕಳ್ಳನ ಬಂಧನ: 17.20 ಲಕ್ಷ ಮೌಲ್ಯದ ಸ್ವತ್ತು ವಶ

 ದಾವಣಗೆರೆ:

      ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಗ್ರಾಮಾಂತರ ಪ್ರದೇಶದಲ್ಲಿ ನಡೆಯುತ್ತಿದ್ದ ಮನೆಗಳವು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

      ಚನ್ನಗಿರಿಯ ಲಷ್ಕರ್‌ಮೊಹಲ್ಲಾ ನಿವಾಸಿ ಅಫ್ರೋಜ್ ಅಹ್ಮದ್ (35) ಬಂಧಿತ ಆರೋಪಿ.

      ಆರೋಪಿಯಿಂದ 13 ಪ್ರಕರಣಗಳಿಗೆ ಸಂಬಂಧಿಸಿದಂತೆ 519 ಗ್ರಾಂ ಚಿನ್ನಾಭರಣ ಹಾಗೂ 2,800 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಳ್ಳಿಗಳಲ್ಲೆ ಕಳವು:

      ಆರೋಪಿ ಅಫ್ರೋಜ್ ಹಳ್ಳಿಗಳಲ್ಲೇ ಕಳ್ಳತನ ಮಾಡುತ್ತಿದ್ದ. ಬೀಗ ಹಾಕಿದ್ದ ಮನೆಗಳನ್ನು ಗಮನಿಸುತ್ತಿದ್ದ, ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಾತ್ರಿಪಡಿಸಿಕೊಂಡು ಕಳವು ಮಾಡುತ್ತಿದ್ದ ಎಂದು ಹೇಳಿದರು.

      ಆರೋಪಿಯ ಬಂಧನದಿಂದಾಗಿ ದಾವಣಗೆರೆಯ 6, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳ 7 ಕಳವು ಪ್ರಕರಣಗಳನ್ನು ಭೇದಿಸಿದಂತಾಗಿದೆ. ಆರೋಪಿ ಇನ್ನು ಹಲವು ಕಡೆ ಕಳವು ಮಾಡಿರುವು ಸುಳಿವು ಸಿಕ್ಕಿದ್ದು, ಈತ ಯಾರಿಗೆ ಚಿನ್ನಾಭರಣ ಮಾರಾಟ ಮಾಡಿದ್ದಾನೆ ಎಂಬ ನಿಟ್ಟಿನಲ್ಲೂ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಶಿಕ್ಷೆ ಅನುಭವಿಸಿರುವ ಆರೋಪಿ:

      ಆರೋಪಿ ಅಫ್ರೋಜ್ ಭದ್ರಾವತಿಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾದ 32 ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಂದು ವರ್ಷ ಶಿಕ್ಷೆ ಅನುಭವಿಸಿದ್ದ. ಜೈಲಿನಿಂದ ಬಿಡುಗಡೆಯಾಗಿ ಮತ್ತೆ ದುಷ್ಕೃತ್ಯ ಆರಂಭಿಸಿದ ಆರೋಪಿ ಒಂದೇ ವರ್ಷದಲ್ಲಿ 16 ಕಳವು ಮಾಡಿದ್ದಾನೆ ಎಂದು ತಿಳಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap