ನವದೆಹಲಿ :
ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕರ್ನಾಟಕದ ಬಳ್ಳಾರಿಯಲ್ಲಿ ಎಂಟು ವಾರಗಳ ಕಾಲ ಉಳಿಯಲು ಸುಪ್ರೀಂ ಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.
ಅಕ್ರಮ ಗಣಿ ಪ್ರಕರಣದಲ್ಲಿ ಬಳ್ಳಾರಿಗೆ ತೆರಳದಂತೆ ಆದೇಶ ಕೋರಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ಇಂದು ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಅನುಮತಿ ನೀಡಿದೆ.
ಅಕ್ರಮ ಗಣಿ ಪ್ರಕರಣದಲ್ಲಿ ಜನಾರ್ಧನ ರೆಡ್ಡಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದರೂ ಅವರ ಸ್ವಂತ ಜಿಲ್ಲೆ ಬಳ್ಳಾರಿಗೆ ತೆರಳದಂತೆ ಷರತ್ತು ವಿಧಿಸಿತ್ತು. ಈ ಕುರಿತಂತೆ ಮತ್ತೆ ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ಇದೀಗ ಬಳ್ಳಾರಿಗೆ ತೆರಳಲು ಷರತ್ತು ಬದ್ಧ ಅನುಮತಿ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/08/Janardhana-reddy.jpg)