ಬಂಟ್ವಾಳ:
ಶೌಚಾಲಯದ ಗುಂಡಿಗೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವಿಟ್ಲ ಸಮೀಪದ ನೆಟ್ಲಮುಡ್ನೂರು ಗ್ರಾಮದಲ್ಲಿ ಗುರುವಾರ ನಡೆದಿದೆ.
ರಾಜೇಶ್ (30) ಮೃತರು ದುರ್ದೈವಿ. ರಾಜೇಶ್ ಅವರು ಜೆಸಿಬಿ ಆಪರೇಟರ್ ಆಗಿದ್ದು, ಕೆದಿಲ ಗ್ರಾಮದ ಕಲ್ಲರ್ಪೆ ನಿವಾಸಿ. ನೆಟ್ಲ ಮುಡ್ನೂರು ಗ್ರಾಮದ ಪೆರ್ಲೊಟ್ಟು ಎಂಬಲ್ಲಿನ ಸೈಟ್ ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಲ್ಲಿನ ಜಾಗವೊಂದನ್ನು ಜೆಸಿಬಿ ಮೂಲಕ ಸಮತಟ್ಟು ಮಾಡಿದ್ದು, ಇದೇ ಸ್ಥಳದಲ್ಲಿದ್ದ ಶೌಚಾಲಯದ ಗುಂಡಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
