ಮೈಸೂರು :
ಈ ಬಾರಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ, ಆದರೆ ಜೆಡಿಎಸ್ ಕಾರ್ಯಕರ್ತರೆಲ್ಲ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ ನೊಂದಿಗೆ ಸೇರಿ ಬಿಜೆಪಿಯನ್ನು ಮಣಿಸಲು ನಾವು ಸಾಕಷ್ಟು ಪ್ರಯತ್ನ ಪಟ್ಟಿದ್ದೆವು. ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ಒಟ್ಟಿಗೆ ಕೆಲಸ ಮಾಡಬೇಕಿತ್ತು. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ತಪ್ಪಾಗಿದೆ. ಉದ್ದೂರು ಪಂಚಾಯಿತಿ ಸೇರಿ ಕೆಲವೆಡೆ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತಹಾಕಿದ್ದಾರೆ ಎಂದು ಹೇಳಿದರು.
ಮೈತ್ರಿ ವಿಚಾರದಲ್ಲಿ ಒಂದು ಕಡೆ ತಪ್ಪಾಗಿಲ್ಲ, ಎರಡು ಕಡೆ ತಪ್ಪಾಗಿದೆ. ಆಯಾ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಿತ್ತು. ಮೈತ್ರಿ ತೀರ್ಮಾನದಲ್ಲಿ ಬಹಳ ತಡವಾಯಿತು. ತಡವಾಗಿ ಮೈತ್ರಿ ಮಾಡಿಕೊಂಡ ಕಾರಣ ಎಡವಟ್ಟಾಗಿದೆ. ಕಾರ್ಯಕರ್ತರ ನಡುವಿನ ಜಿದ್ದಾಜಿದ್ದಿ ಸರಿಯಾಗಿಲ್ಲ. ಆದರೂ ಕೆಲವು ಕಡೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಒಂದು ವೇಳೆ ಜೆಡಿಎಸ್- ಕಾಂಗ್ರೆಸ್ ಒಟ್ಟಾಗಿದ್ದರೆ ಬಿಜೆಪಿಗೆ 5 ಸ್ಥಾನ ಗೆಲ್ಲುವುದಕ್ಕೂ ಜಾಗ ಇರುತ್ತಿರಲಿಲ್ಲ. ನಾವು ತಡವಾಗಿ ಮೈತ್ರಿ ಮಾಡಿಕೊಂಡೆವು. ಪರಿಣಾಮ ಕಾರ್ಯಕರ್ತರು ಒಟ್ಟಾಗಲು ಸಾಧ್ಯವಾಗಲಿಲ್ಲ. ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪರ ಕೆಲಸ ಮಾಡಿಲ್ಲ ಎಂಬ ಆರೋಪಗಳಿದ್ದ ಬೆನ್ನಲ್ಲೇ ಜೆಡಿಎಸ್ನವರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಬಹಿರಂಗವಾಗಿಯೇ ಸಚಿವ ಜಿಟಿಡಿ ಒಪ್ಪಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ