ಎಲ್ಲಾ ಶಾಸಕರು ಶಾಸಕಾಂಗ ಸಭೆಗೆ ಭಾಗವಹಿಸುವಂತೆ ಸಿಎಂ ಸೂಚನೆ

ಬೆಂಗಳೂರು :

    ಕಾಂಗ್ರೆಸ್ ಪಕ್ಷ ಶಾಸಕಾಂಗ ಪಕ್ಷದ ಸಭೆ ಕರೆದ ಬೆನ್ನಲ್ಲೇ ಜೆಡಿಎಸ್ ಪಕ್ಷವೂ ಇಂದು ಶಾಸಕಾಂಗ ಪಕ್ಷದ ಸಭೆ ಕರೆದಿದೆ.

    ಇಂದು ಸಂಜೆ 7 ಗಂಟೆಗೆ ಬೆಳಗಾವಿ-ಖಾನಾಪುರ ರಸ್ತೆಯಲ್ಲಿರುವ ಜಂಗಲ್ ಲಾಡ್ಜ್ ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಸಿಎಂ ಕುಮಾರಸ್ವಾಮಿ ಅವರು ಶಾಸಕಾಂಗ ಸಭೆ ಕರೆದಿದ್ದಾರೆ. ಸಭೆಯಲ್ಲಿ ಎಲ್ಲಾ ಶಾಸಕರು ಭಾಗವಹಿಸಬೇಕೆಂದು ಸೂಚನೆ ನೀಡಿದ್ದಾರೆ.

      ಇನ್ನು ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ಸಚಿವ ಸಂಪುಟಕ್ಕೆ ಸೇರ್ಪಡೆ, ನಿಗಮ ಮಂಡಳಿಗಳಿಗೆ ನೇಮಕ ಸೇರಿದಂತೆ ಹಲವು ವಿಚಾರಗಳ ಚರ್ಚೆಯಾಗಲಿವೆ ಎನ್ನಲಾಗಿದ್ದು, ಉತ್ತರ ಕರ್ನಾಟಕ ಭಾಗದ ಶಾಸಕರಿಗೆ ಸಚಿವ ಸಂಪುಟದಲ್ಲಿ ಮನ್ನಣೆ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap