ಹೆಚ್.ವಿಶ್ವನಾಥ್ ರಿಂದ ರಾಜಕೀಯ ನಿವೃತ್ತಿ!!

ನವದೆಹಲಿ :

      ಅತೃಪ್ತ ಶಾಸಕರೊಂದಿಗೆ ಮುಂಬೈ ಸೇರಿ, ರಾಜ್ಯ ರಾಜಕೀಯದಲ್ಲಿ ಮೈತ್ರಿ ಸರ್ಕಾರ ಪಥನಕ್ಕೆ ಕಾರಣರಾದವರಲ್ಲಿ ಒಬ್ಬರೆನಿಸಿಕೊಂಡಿದ್ದ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಇದೀಗ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

       ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ನ ಅನರ್ಹ ಶಾಸಕ ಹೆಚ್ ವಿಶ್ವನಾಥ್,”ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸೋದಿಲ್ಲ. ಇಂದಿನಿಂದಲೇ ಚುನಾವಣಾ ರಾಜಕಾರಣದಿಂದ ದೂರ ಉಳಿಯುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

       ಇನ್ನು ಬಿಜೆಪಿಗೂ ನಮಗೂ ಯಾವುದೇ ಸಂಬಂಧ ಇಲ್ಲ. ಹೀಗಾಗಿ ನಾವ್ಯಾರು ಬಿಜೆಪಿಗೆ ಹೋಗುವ ಪ್ರಶ್ನೆಯೇ ಸಂಭವಿಸುವುದಿಲ್ಲ. ಪ್ರಪಂಚ ತುಂಬಾ ವಿಶಾಲವಾಗಿದೆ. ನಾವೇ(ಅನರ್ಹ ಶಾಸಕರು) 20 ಶಾಸಕರೂ ಸೇರಿ ಹೊಸಪಕ್ಷ ಕಟ್ಟಿದ್ರಾಯ್ತು ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link