ಶಾಸಕ ಕೆ.ಸುಧಾಕರ್ ರಾಜೀನಾಮೆ!!!

ಬೆಂಗಳೂರು :

       ರಾಜ್ಯ ಸರ್ಕಾರದ ಆಯುಷ್ಯ ಕಡಿಮೆಯಾಗುತ್ತಿದ್ದು, ಇಂದು ಕಾಂಗ್ರೆಸ್ ಶಾಸಕ ಕೆ.ಸುಧಾಕರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

     ಮಧ್ಯಾಹ್ನ 4 ಗಂಟೆ ವಿಧಾನಸೌಧಕ್ಕೆ ಆಗಮಿಸಿದ ಶಾಸಕ ಸುಧಾಕರ್ ನೇರವಾಗಿ ಪೊಲೀಸ್ ಭದ್ರತೆಯಲ್ಲಿ ಸ್ಪೀಕರ್ ಕಚೇರಿಗೆ ತೆರಳಿ ಸ್ವ ಬರಹದಲ್ಲಿ ಬರೆದ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಆರಂಭದಿಂದಲೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರುತ್ತಿದ್ದ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಧಾಕರ್ ಬಿಜೆಪಿಗೆ ಸೇರುತ್ತಾರೆಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ, ಇತ್ತೀಚೆಗೆ ಅವರನ್ನು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ದೋಸ್ತಿ ಸರ್ಕಾರ ಅಸಮಾಧಾನ ಹೊಗೆಯನ್ನು ತಣಿಸಲು ಪ್ರಯತ್ನಿಸಿತ್ತು. ಆದರೆ, ಅಚ್ಚರಿ ಎಂಬಂತೆ ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಗೆ ಇವರು ಗೈರು ಹಾಜರಾಗಿದ್ದರು.

      ಈ ಮೂಲಕ, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವ ಕಾಂಗ್ರೆಸ್ ಶಾಸಕರ ಪಟ್ಟಿ ಮುಂದುವರೆದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap