ಕಲಬುರ್ಗಿ:
ಇಲ್ಲಿಯ ಗುಲಬರ್ಗಾ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಮತ್ತು ಅಧ್ಯಯನ ಸಂಸ್ಥೆಯಲ್ಲಿ ಇಂದು ಆಯೋಜಿಸಿದ್ದ ಕನ್ಹಯ್ಯ ಕುಮಾರ್ ಅವರ ಉಪನ್ಯಾಸವನ್ನು ರದ್ದು ಮಾಡಲಾಗಿದೆ.
ವಿವಿಯ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಇಂದು ‘ಅಂಬೇಡ್ಕರ್ ಕಂಡ ಆಧುನಿಕ ಭಾರತದಲ್ಲಿ ಯುವಕರ ಪಾತ್ರ ಕುರಿತು ಕನ್ಹಯ್ಯ ಕುಮಾರ ಉಪನ್ಯಾಸ ನೀಡಬೇಕಿತ್ತು.
ಕನ್ಹಯ್ಯ ಉಪನ್ಯಾಸಕ್ಕೆ ಶ್ರೀರಾಮಸೇನೆ ಮತ್ತು ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ನಿನ್ನೆ ಹಂಗಾಮಿ ಕುಲಪತಿ ಪ್ರೊ.ಪರಿಮಳಾ ಅಂಬೇಕರ್ ಸಿಂಡಿಕೇಟ್ ಸಭೆ ನಡೆಸಿ, ಕನ್ಹಯ್ಯ ವಿಷಯದ ಬಗ್ಗೆ ಮಾತ್ರವೇ ಮಾತನಾಡಬೇಂದು ಹೇಳಿ ಅನುಮತಿ ನೀಡಿದ್ದರು. ಆದರೆ, ಕನ್ಹಯ್ಯ ಉಪನ್ಯಾಸ ವಿಷಯ ರಾಜ್ಯಪಾಲರಿಗೆ ಮುಟ್ಟಿದ್ದು, ಕಾರ್ಯಕ್ರಮ ರದ್ದು ಪಡಿಸುವಂತೆ ಕುಲಪತಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಉನ್ನತ ಶಿಕ್ಷಣ ಇಲಾಖೆಯಿಂದ ಮೌಖಿಕ ಸೂಚನೆ ಅನುಸಾರ ಕಾರ್ಯಕ್ರಮ ರದ್ದುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದ ಸುತ್ತಮುತ್ತ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
