ರಾಜ್ಯದಲ್ಲಿ ಆಗಸ್ಟ್ ಅಂತ್ಯಕ್ಕೆ ಹೆಚ್ಚಲಿದೆಯಂತೆ ಕೊರೊನಾ ಸಂಖ್ಯೆ!!

ಬಳ್ಳಾರಿ : 

     ಆಗಸ್ಟ್ ಅಂತ್ಯಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಲಿವೆ‌ ಎಂಬ ಪರಿಣಿತರ ವರದಿ ಅನುಸಾರ ತಕ್ಕ‌ ಎಲ್ಲ‌ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

      ನಗರದ ವಿಮ್ಸ್‌ಗೆ ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,    ರಾಜ್ಯದಲ್ಲಿ 3 ಸಾವಿರಕ್ಕೂ‌ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಅವುಗಳಲ್ಲಿ ಶೇ 97ರಷ್ಟು ಜನರಿಗೆ ರೋಗ ಲಕ್ಷಣಗಳೇ ಇಲ್ಲ. ಆಗಸ್ಟ್ ಅಂತ್ಯಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಲಿವೆ‌ ಎಂಬ ಪರಿಣಿತರ ವರದಿ ಅನುಸಾರ ತಕ್ಕ‌ ಎಲ್ಲ‌ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

      ಜ್ವರ ಬಾಧಿತರೇ ರಾಜ್ಯದಲ್ಲಿ ಅತಿಹೆಚ್ಚು ಕೊರೊನಾ ಸೊಂಕಿಗೀಡಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಂಥ ಲಕ್ಷಣಗಳು ಇರುವವರನ್ನು ಪ್ರತ್ಯೇಕ ಮಾಡಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. 60 ವರ್ಷ ಮೇಲ್ಪಟ್ಟವರ ಪ್ರಕರಣಗಳನ್ನು ಮೊದಲಿಗೆ ಪತ್ತೆಹಚ್ಚಿ ಪರೀಕ್ಷಿಸಲು ತಿಳಿಸಲಾಗಿದೆ.  ಹವಾಮಾನ ಬದಲಾವಣೆಯಾಗಿ ಸಾಮಾನ್ಯವಾಗಿ ಕೆಮ್ಮು, ನೆಗಡಿ, ಜ್ವರದಿಂದ ಬಳಲುವವರು ಫೀವರ್ ಕ್ಲಿನಿಕ್‌ಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap