ಬೆಂಗಳೂರು:
ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ಒಪ್ಪಿಗೆ ನೀಡಿದೆ.
ವಿಧಾನಸೌಧದಲ್ಲಿಂದು ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಈ ಬಗ್ಗೆ ಬುಧವಾರ ಡಿಕೆಶಿ ಜೊತೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ಹೇಳಿದ್ದಾರೆ.
ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಹೆಚ್ಚು ಜನ ಸೇರಬಹುದೆಂಬ ಕಾರಣಕ್ಕೆ ಅನುಮತಿ ನೀಡಿರಲಿಲ್ಲ. ಜನಸಂದಣಿಯಾಗದಂತೆ ಎಚ್ಚರ ವಹಿಸಿ ಅವರು ಕಾರ್ಯಕ್ರಮ ಮಾಡಿದರೆ ನಮ್ಮ ಅಡ್ಡಿಯಿಲ್ಲ. ಈ ಬಗ್ಗೆ ಅವರ ಜೊತೆಯೂ ಚರ್ಚಿಸಿದ್ದೇನೆ. ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ಪದಗ್ರಹಣ ಸಮಾರಂಭ ಭಾರಿ ಚರ್ಚೆಗೆ ಕಾರಣವಾಗಿತ್ತು. “ಡಿ. ಕೆ. ಶಿವಕುಮಾರ್ ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ. ನಮ್ಮದೇನು ಅಭ್ಯಂತರವಿಲ್ಲ” ಎಂದು ದೂರವಾಣಿ ಮೂಲಕ ಡಿ.ಕೆ.ಶಿವಕುಮಾರ್ ಗೆ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ