2010 ರ ಅತ್ಯಾಚಾರ ಪ್ರಕರಣ : ನಿತ್ಯಾನಂದನ ಜಾಮೀನು ರದ್ದು!!

ಬೆಂಗಳೂರು: 

      ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಅವರಿಗೆ ನೀಡಿದ್ದ ಜಾಮೀನನ್ನು ರದ್ದುಪಡಿಸಿದೆ.

      ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮೀಜಿಗೆ 2010ರಲ್ಲಿ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ದೂರುದಾರ  ಲೆನಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರ ಪೀಠ ಇಂದು  ತೀರ್ಪು ಪ್ರಕಟಿಸಿದೆ.

      ಆರೋಪಿಗಳನ್ನು ಬಂಧಿಸಲು ಆದೇಶಿಸಿ ಮತ್ತು ಜಾಮೀನು ಮತ್ತು ಬಾಂಡ್‌ಗಳನ್ನು ಮುಟ್ಟುಗೋಲು ಹಾಕುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ನ್ಯಾಯಮೂರ್ತಿಗಳು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದಾರೆ.

      ಕಳೆದ ಸೋಮವಾರ “ಅತ್ಯಾಚಾರ ಆರೋಪವೊತ್ತ ನಿತ್ಯಾನಂದ ದೇಶ ಬಿಟ್ಟು ಪರಾರಿಯಾಗಿದ್ದಾನೆ. ಆತನ ಪಾಸ್‌ಪೋರ್ಟ್‌ ಅವಧಿ ಮುಗಿದಿದೆ. ಹೀಗಿದ್ದರೂ ವಿದೇಶ ಪ್ರವಾಸ ಕೈಗೊಂಡಿದ್ದಾನೆ. 2 ನೇ ಆರೋಪಿಯೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ನಿತ್ಯಾನಂದನ ಜಾಮೀನು ರದ್ದುಪಡಿಸಬೇಕು” ಎಂದು ಲೆನಿನ್‌ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಇದೀಗ ಲೆನಿನ್​​​ ಪರ ವಕೀಲರ ಮನವಿ ಎತ್ತಿಹಿಡಿದ ಹೈಕೋರ್ಟ್​ ಏಕಸದಸ್ಯ ಪೀಠ​, ನಿತ್ಯಾನಂದ ಜಾಮೀನು ರದ್ದುಗೊಳಿಸಿದೆ. ಅಲ್ಲದೆ ಆರೋಪಿ ನಿತ್ಯಾನಂದನನ್ನು ವಶಕ್ಕೆ ಪಡೆಯುವಂತೆ ವಿಚಾರಣಾ ಕೋರ್ಟ್ ಗೆ ಸೂಚಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap