ಎಸ್‌ಎಸ್‌ಎಲ್‌ಸಿ – ಪಿಯು ಮಂಡಳಿ ವಿಲೀನ!!

ಬೆಂಗಳೂರು :

     ಎಸ್‌ಎಸ್‌ಎಲ್ ಸಿ (ಪ್ರೌಢಶಿಕ್ಷಣ ಮಂಡಳಿ) ಮಂಡಳಿಯಲ್ಲಿ, ಪಿಯ (ಪದವಿ ಪೂರ್ವ ಶಿಕ್ಷಣ) ಮಂಡಳಿಯನ್ನು ವಿಲೀನಗೊಳಿಸಲು ಸರ್ಕಾರ ಮುಂದಾಗಿದೆ.

      ಈ ಎರಡೂ ಮಂಡಳಿಗಳನ್ನು ವಿಲೀನ ಮಾಡುವ ಪ್ರಸ್ತಾವವು ಬಹುದಿನಗಳಿಂದ ಸರ್ಕಾರದ ಮುಂದೆ ಇತ್ತು. ಅದಕ್ಕೆ ಈಗ ಕಾಯಕಲ್ಪ ದೊರೆತಿದೆ. 

      ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶುಕ್ರವಾರ ನಡೆದ ಶಿಕ್ಷಣ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಕರ್ನಾಟಕ ಮಾಧ್ಯಮಿಕ ಶಾಲಾ ಪರೀಕ್ಷಾ ಮಂಡಳಿಯೇ ಎಸ್‌ಎಸ್‌ಎಲ್ ಸಿ ಮತ್ತು ಪಿಯು ಪರೀಕ್ಷೆಗಳನ್ನು ನಡೆಸಲಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

     ಸಭೆಯ ಬಳಿಕ ಮಾತನಾಡಿದ ಸಚಿವ ಸುರೇಶ್, ಸಭೆಯಲ್ಲಿ ಎರಡೂ ಮಂಡಳಿಗಳನ್ನು ವಿಲೀನಗೊಳಿಸುವ ಪ್ರಸ್ತಾವದ ಬಗ್ಗೆ ಚರ್ಚೆ ನಡೆದಿದೆ. ನಾವು ಇದರ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಿದ್ದೇವೆ. ಎರಡೂ ಮಂಡಳಿಗಳನ್ನು ವಿಲೀನಗೊಳಿಸುವ ಸಲುವಾಗಿ ಈಗಾಗಲೇ 50 ಕೋಟಿ ರೂ. ಅನ್ನು ತೆಗೆದಿರಿಸಲಾಗಿದ್ದು, ಎರಡೂ ಇಲಾಖೆಗಳಿಗೆ ಇದರಿಂದ ಹಣ ಉಳಿತಾಯವಾಗಲಿದೆ ಎಂದರು.

      ಪ್ರೌಢಶಿಕ್ಷಣಾ ಮಂಡಳಿ (ಕೆಎಸ್‌ಇಇಬಿ) ಮತ್ತು ಪದವಿ ಪೂರ್ವ ಶಿಕ್ಷಣ ಮಂಡಳಿ ಪ್ರತ್ಯೇಕವಾಗಿ ಇಷ್ಟು ದಿನ ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ವಿಲೀನವು ಅಂತ್ಯವಾದ ಈ ಎರಡೂ ಮಂಡಳಿಗಳು ಒಟ್ಟಿಗೆ ಕಾರ್ಯ ನಿರ್ವಹಿಸಲಿದ್ದು,  2020 ರ ಪರೀಕ್ಷೆಗಳನ್ನು ಒಂದೇ ಮಂಡಳಿ ನಡೆಸಲಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap