ನಾಳೆ ನಡೆಯಬೇಕಿದ್ದಂತ ಕೆಂಪೇಗೌಡ ಜಯಂತಿ ಮುಂದೂಡಿಕೆ!!

ಬೆಂಗಳೂರು :

     ಸೆಪ್ಟೆಂಬರ್ 2ರ ನಾಳೆ ನಿಗಧಿಯಾಗಿದ್ದಂತ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನದ ಹಿನ್ನಲೆಯಲ್ಲಿ ಮುಂದೂಡಲಾಗಿದೆ.

      ಈ ಕುರಿತಂತೆ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್ ಮಾಹಿತಿ ನೀಡಿದ್ದು, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನಿಧಿವಶರಾದ ಹಿನ್ನಲೆಯಲ್ಲಿ ದೇಶಾದ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದೆ.

     ರಾಜ್ಯದಲ್ಲೂ 7 ದಿನಗಳ ಕಾಲ ಶೋಕಾಚರಣೆ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ನಾಳೆ ನಡೆಯಲು ನಿಗದಿಪಡಿಸಲಾಗಿದ್ದಂತ ನಾಡ ಪ್ರಭು ಕೆಂಪೇಗೌಡ ಜಯಂತಿಯನ್ನು ಮುಂದೂಡಿಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯ ದಿನಾಂಕ ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap