ಬೆಳಗಾವಿ : ನಾಯಿ ಜೀವ ಉಳಿಸಲು ಹೋಗಿ ಪ್ರಾಣ ಬಿಟ್ಟ ಪಿಎಸ್ ಐ!!

ಬೆಳಗಾವಿ:

        ರಸ್ತೆಯಲ್ಲಿ ಎದುರು ಬಂದ ನಾಯಿಯ ಜೀವ ಉಳಿಸಲು ಹೋಗಿ ಬೈಕ್ ಸ್ಕಿಡ್ ಆಗಿ ಪಿಎಸ್ ಐ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ.

      ಇಲ್ಲಿಯ ಖಡೇಬಜಾರ್ ಪೊಲೀಸ್ ಠಾಣೆಯ ಪಿಎಸ್‌ಐ ಆಗಿದ್ದ ಮನೋಹರ ಗಣಾಚಾರಿ ಅವರು ಲಾಕ್ ಡೌನ್ ಬಂದೋಬಸ್ತ್ ಗಾಗಿ  ಕರ್ತವ್ಯಕ್ಕೆ ಹಾಜರಾಗಲು ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ. 

      ಯಳ್ಳೂರು ಸಮೀಪದ ಕೆಎಲ್ ಇ ಆಸ್ಪತ್ರೆ ಬಳಿ ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬರುತ್ತಿದ್ದಾಗ ನಾಯಿ ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ತಪ್ಪಿಸಲು ಹೋಗಿ ಸ್ಕಿಡ್ ಆಗಿ ಬಿದ್ದಿದ್ದಾರೆ. ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ರಸ್ರಾವವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

      ಮೃತಪಟ್ಟ ಮನೋಹರ ಗಣಾಚಾರಿ ಆರು ತಿಂಗಳ ಹಿಂದಷ್ಟೇ ಬಡ್ತಿ ಹೊಂದಿ ಪಿಎಸ್‌ಐ ಆಗಿದ್ದರು. ವರ್ಷದ ಹಿಂದಷ್ಟೇ ಯಳ್ಳೂರಿನಲ್ಲಿ ಮನೆ ಕಟ್ಟಿಸಿದ್ದರು. ಮುಂದಿನ ಸೆಪ್ಟೆಂಬರ್ ತಿಂಗಳಲ್ಲಿ ನಿವೃತ್ತಿಯಾಗುವವರಿದ್ದರು. ಅಷ್ಟರೊಳಗೆ ಈ ದುರಂತ ಸಂಭವಿಸಿದೆ.‌ ಮೃತರು ಪತ್ನಿ, ಪುತ್ರ, ಮತ್ತು ತಂದೆ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap