ಸುಮಲತಾ ಪರ ಪ್ರಚಾರಕ್ಕೆ ಸುದೀಪ್ ಎಂಟ್ರಿ!!!

ಬೆಂಗಳೂರು :

      ಮಂಡ್ಯ ಲೋಕಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಪರ ಪ್ರಚಾರಕ್ಕೆ ಇದೀಗ ಸುದೀಪ್ ಕೂಡ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.

      ಸುಮಲತಾ ಅಂಬರೀಶ್ ಪರ ನಟ ಕಿಚ್ಚ ಸುದೀಪ್ ಏಪ್ರಿಲ್ 10 ಹಾಗೂ 11 ರಂದು ಸುಮಲತಾ ಪರವಾಗಿ ಮಳವಳ್ಳಿ ಸೇರಿದಂತೆ ಹಲವೆಡೆ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಈ ಹಿಂದೆ ಸುಮಲತಾ ಅಂಬರೀಶ್ ಪರವಾಗಿ ಚುನಾವಣಾ ಪ್ರಚಾರಕ್ಕೆ ಬರುವುದಾಗಿ ಹೇಳಿದ್ದರು. ಅದರಂತೆ ಇದೀಗ ಸುಮಲತಾ ಪ್ರಚಾರಕ್ಕೆ ಬರುತ್ತಿದ್ದಾರೆ.

     ಈಗಾಗಲೇ ಸುಮಲತಾ ಪರ ದರ್ಶನ್ ಹಾಗೂ ಯಶ್ ಪ್ರಚಾರ ನಡೆಸುವುದಾಗಿ ಹೇಳಿದ್ದರು. ಇದೀಗ ಸುದೀಪ್ ಅವರೂ ಮಂಡ್ಯ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap