ತುಮಕೂರು :
ಕಾಂಗ್ರೆಸ್ ನಾಯಕ, ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಕೆ. ಎನ್. ರಾಜಣ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಭಾನುವಾರ ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆ.ಎನ್.ರಾಜಣ್ಣ, ” ಬರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ, ಮುಂದೆ ಮಧುಗಿರಿ ಕ್ಷೇತ್ರದಲ್ಲಿ ಯಾರೇ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಜಿ ಸಲ್ಲಿಸಲು ಮುಂದೆ ಬಂದರೆ ನಾನು ಬೆಂಬಲಿಸುತ್ತೇನೆ. ನಾನಂತೂ ಸ್ಪರ್ಧೆ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ : ದೇವೇಗೌಡ ಹಾಗೂ ಪರಮೇಶ್ವರ್ ಕೈವಾಡ !!?
2018ರ ಚುನಾವಣೆಯಲ್ಲಿ ಕೆ. ಎನ್. ರಾಜಣ್ಣ 69, 947 ಮತಗಳನ್ನು ಪಡೆದು ಸೋಲು ಕಂಡಿದ್ದರು. ಅವರ ಎದುರಾಳಿಯಾಗಿದ್ದ ಜೆಡಿಎಸ್ನ ಎಂ.ವಿ.ವೀರಭದ್ರಯ್ಯ 88,521 ಮತಪಡೆದು ಜಯಗಳಿಸಿದ್ದರು.
ಡಿಸಿಸಿ ಬ್ಯಾಂಕ್ ಸೂಪರ್ ಸೀಡ್ ಹಿಂದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ರಾಜಕೀಯ ದ್ವೇಷ ಅಡಗಿದೆ ಎಂದು ಕೆ. ಎನ್. ರಾಜಣ್ಣ ಆರೋಪ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/07/RAJANNA-e1563704165528.gif)