ಗದಗ :
ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ಜನ ತತ್ತರಿಸಿರುವಾಗಲೇ ರಾಜ್ಯದಲ್ಲಿ ಮತ್ತೆ ವಿಪತ್ತು ಸಂಭವಿಸುತ್ತದೆ ಎಂದು ಗದಗದಲ್ಲಿ ಕೋಡಿಮಠದ ಶ್ರೀ ಭವಿಷ್ಯ ನುಡಿದಿದ್ದಾರೆ.
ಬಾಗಲಕೋಟೆಯ ಪ್ರವಾಹ ಪೀಡಿತ ಶಿವಯೋಗಿ ಮಂದಿರಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, ಈ ಸಂವತ್ಸರದಲ್ಲಿ ಜಲ ಆಘಾತ ಆಗಿದೆ. ಶ್ರಾವಣ ಮಾಸದ ಕೊನೆಯವರೆಗೂ ಹಾಗೂ ಕಾರ್ತಿಕ ಮಾಸದ ನಡುವೆಯೂ ಒಟ್ಟು 3 ತಿಂಗಳವರೆಗೆ ಜಲ ಕಂಟಕ ಇದೆ ಎಂದು ಭವಿಷ್ಯ ನುಡಿದಿದ್ದಾರೆ.
ಈ ವರ್ಷ ಜಲ ಆಘಾತ, ಭೂ ಆಘಾತ ಹಾಗೂ ವಾಯು ಆಘಾತಗಳು ಸಂಭವಿಸುತ್ತವೆ. ಈಗ ಜಲ ಆಘಾತವಾಗುತ್ತಿದೆ. ಮುಂದಿನ ದಿನಗಗಳಲ್ಲಿ ಭೂ ಆಘಾತಗಳಾಗುತ್ತವೆ. ಭೂಮಿ ನಡುಗುವುದು, ಭೂಕುಸಿತವಾಗುವುದು ಮತ್ತು ದೊಡ್ಡ ದೊಡ್ಡ ನಗರಗಳಲ್ಲಿ ಕಟ್ಟಡಗಳು ಕುಸಿಯುವುದು ಸಂಭವಿಸುತ್ತದೆ. ಹಾಗೆಯೇ ಜಗತ್ತು ಕಂಡರಿಯದ ವಾಯು ಆಘಾತವೊಂದು ಆಗುವ ಲಕ್ಷಣ ಇದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ