ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣ!!

ಬೆಂಗಳೂರು : 

    ಕೆಪಿಸಿಸಿ ನೂತನ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ನ ಅಧ್ಯಕ್ಷರಾಗಿ ಅಧಿಕೃತವಾಗಿ ಡಿ.ಕೆ.ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಿದರು.

     ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಹಿಂಭಾಗದ ನೂತನ ಕಟ್ಟಡದಲ್ಲಿ ಸಮಾರಂಭ ಆರಂಭವಾಗಿದ್ದು, ಪಕ್ಷದ ಹಳೇ ಕಚೇರಿಯ ಎದುರುಗಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷದ ಧ್ವಜಾರೋಹಣ ನೆರವೇರಿಸಿದರು. ವಂದೇ ಮಾತರಂ ಗೀತೆ ಗಾಯನ ಮಾಡಲಾಗಿದ್ದು, ರಾಷ್ಟ್ರಗೀತೆ ಕೂಡ ಹಾಡಲಾಯಿತು. ಈ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಡಿಕೆಶಿ ವೇದಿಕೆಗೆ ಆಗಮಿಸಿದರು.

      ಕಾರ್ಯಕ್ರಮದಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷದ ಬಾವುಟವನ್ನು ಡಿ.ಕೆ.ಶಿವಕುಮಾರ್ ಅವರಿಗೆ ಹಸ್ತಾಂತರಿಸಿದರು. ಇದೇ ವೇಳೆ, ಪಕ್ಷದ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್​, ಸತೀಶ್​ ಜಾರಕಿಹೊಳಿ ಹಾಗೂ ಈಶ್ವರ ಖಂಡ್ರೆ ಅವರಿಗೆ ಪತ್ರಿಜ್ಞಾವಿಧಿ ಸ್ವೀಕರಿಸಿದರು.

      ಕಾಂಗ್ರೆಸ್ ಹೈಕಮಾಂಡ್ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಿಸಿ ನಾಲ್ಕು ತಿಂಗಳೇ ಕಳೆದಿವೆ. ಆದರೆ, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಡಿಕೆಶಿ ಪದಗ್ರಹಣ ವಿಳಂಬವಾಗಿತ್ತು. ಈ ಹಿಂದೆ ಮೂರು ಬಾರಿ ಅಧಿಕಾರಿ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತಾದ್ದರೂ ಸರ್ಕಾರದಿಂದ ಅನುಮತಿ ಸಿಗದೇ ಮುಂದೂಡಲಾಗಿತ್ತು. ಈ ಬಾರಿ ಕೆಲ ಸೂಚನೆಗಳನ್ನು ನೀಡಿ ಸಿಎಂ ಯಡಿಯೂರಪ್ಪ ಅವರೇ ಡಿಕೆಶಿ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಅನುಮತಿ ಕೊಟ್ಟಿದ್ದಾರೆ. ಅದರಂತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆದಿದೆ. 

      ಈ ಮೂಲಕ ರಾಜ್ಯ ಕಾಂಗ್ರೆಸ್ ನಲ್ಲಿ ಇಂದಿನಿಂದ ಅಧಿಕೃತವಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಹವಾ ಶುರುವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap