ಚಲಿಸುವ ಬಸ್‌ನಿಂದ ವಿದ್ಯಾರ್ಥಿನಿಯನ್ನು ಹೊರದಬ್ಬಿದ ಕಂಡಕ್ಟರ್!!

ಬೆಂಗಳೂರು :

      ಚಲಿಸುತ್ತಿರುವ ಬಸ್ಸಿನಿಂದ ವಿದ್ಯಾರ್ಥಿನಿಯನ್ನು ಕಂಡಕ್ಟರ್ ಒಬ್ಬ ಹೊರಕ್ಕೆ ತಳ್ಳಿದ ಅಮಾನವೀಯ ಘಟನೆ ನಗರದಲ್ಲಿ ನಡೆದಿದೆ.

      ಪ್ರಥಮ ಪಿಯುಸಿ ಓದುತ್ತಿರುವ ಭೂಮಿಕಾ (16) ಎಂಬ ವಿದ್ಯಾರ್ಥಿ ಕಾಲೇಜು ಮುಗಿಸಿಕೊಂಡು 3 ಗಂಟೆ ಸುಮಾರಿಗೆ ನಗರದಿಂದ ಕೆಎಸ್‌ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ಕಂಡಕ್ಟರ್ ಟಿಕೆಟ್ ತೆಗೆದುಕೊಳ್ಳುವಂತೆ ಹೇಳಿದ್ದಾನೆ. ಇದಕ್ಕೆ ವಿದ್ಯಾರ್ಥಿನಿ ನನ್ನ ಹತ್ತಿರ ಪಾಸ್ ಇದೆ ಎಂದು ಹೇಳಿದ್ದಾಳೆ. ಈ ಬಸ್ಸಿನಲ್ಲಿ ವಿದ್ಯಾರ್ಥಿ ಬಸ್ ಪಾಸ್ ನಡೆಯುವುದಿಲ್ಲ. ಕಡ್ಡಾಯವಾಗಿ ಟಿಕೆಟ್ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾನೆ. ತಾನು ಟಿಕೆಟ್ ತೆಗೆದುಕೊಳ್ಳುವುದಿಲ್ಲ, ಮುಂದಿನ ಸ್ಟಾಪ್‌ನಲ್ಲಿ ಇಳಿದುಬಿಡುತ್ತೇನೆ ಎಂದು ಭೂಮಿಕ ಮನವಿ ಮಾಡಿದ್ದಾಳೆ. ಭೂಮಿಕಾ ಮನವಿಗೆ ಒಪ್ಪದ ನಿರ್ವಾಹಕ ಮಾರ್ಗಮಧ್ಯದಲ್ಲಿಯೇ ಇಳಿಯುವಂತೆ ಹೇಳಿದ್ದಾನೆ. ಆದರೆ ಇದಕ್ಕೆ ಭೂಮಿಕ ಒಪ್ಪದೇ ಇದ್ದಾಗ,  ಬಸ್ ಕಂಡಕ್ಟರ್ ಚಲಿಸುತ್ತಿದ್ದ ಬಸ್ ನಿಂದಲೇ ವಿದ್ಯಾರ್ಥಿನಿಯನ್ನು ನೂಕಿದ್ದಾನೆ.

      ಕೆಳಗೆ ಬಿದ್ದ ವಿದ್ಯಾರ್ಥಿನಿಯ ಹಣೆ ಮತ್ತು ಕಾಲಿಗೆ ಗಾಯಗಳಾಗಿದ್ದು, ಹಲ್ಲುಗಳು ಸಹ ಮುರಿದಿವೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ವಿದ್ಯಾರ್ಥಿನಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ನಂತರ ಇವೆಲ್ಲವನ್ನು ವಿದ್ಯಾರ್ಥಿನಿ ವಿವರಿಸಿದ್ದಾಳೆ.

      ಈ ಕುರಿತು ಪ್ರಕರಣ ದಾಖಲಾಗಿದ್ದು, ಕಂಡಕ್ಟರ್ ಶಿವಶಂಕರ್ ಎಂಬಾತನನ್ನು ಕೆಎಸ್‌ಆರ್ ಟಿಸಿ ನಿರ್ದೇಶಕರಾದ ಶಿವಯೋಗಿ ಅವರು ಸಸ್ಪೆಂಡ್ ಮಾಡಿರುವುದಾಗಿ ತಿಳಿಸಿದ್ದಾರೆ.  

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap