ಬೆಂಗಳೂರು :
ಗೌರಿ – ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಕೆಎಸ್ ಆರ್ ಟಿಸಿ ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಕಲ್ಪಿಸಿದೆ.
ಬೆಂಗಳೂರಿನಿಂದ ಬೇರೆಡೆ ತೆರಳುವವರಿಗೆ ಅನುಕೂಲವಾಗಲೆಂದು ಕೆಎಸ್ಆರ್ ಟಿಸಿ ಸುಮಾರು 1 ಸಾವಿರ ಹೆಚ್ಚುವರಿ ಬಸ್ ಗಳನ್ನು ಕಲ್ಪಿಸಿದ್ದು, ಪ್ರಯಾಣಿಕರು ತಮ್ಮ ಆಸನಗಳನ್ನು ಮುಂಗಡವಾಗಿ ಕಾಯ್ದಿರಿಸಬಹುದು. ಅದಕ್ಕಾಗಿ ಇ-ಟಿಕೆಟ್ ಗಳನ್ನು https://ksrtc.karnataka.gov.in/ ವೆಬ್ ಸೈಟಿಗೆ ಭೇಟಿ ನೀಡಿ ಬುಕ್ ಮಾಡಿಕೊಳ್ಳಬಹುದಾಗಿದೆ. ಹತ್ತಿರದ ಬುಕಿಂಗ್ ಕೌಂಟರ್ ಗಳ ಮೂಲಕವೂ ಟಿಕೆಟ್ಗಳನ್ನು ಕಾಯ್ದಿರಿಸಬಹುದು.
ಇನ್ನು ವಿಶೇಷ ಬಸ್ ಗಳು ಬೆಂಗಳೂರಿನ ಕೆಂಪೇಗೌಡ ನಿಲ್ದಾಣದಿಂದ ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ ,ಧರ್ಮಸ್ಥಳ, ಕುಂದಾಪುರ ,ಮಂಗಳೂರು, ಶೃಂಗೇರಿ ,ಹೊರನಾಡು, ದಾವಣಗೆರೆ ,ಕಲ್ಬುರ್ಗಿ, ರಾಯಚೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ ಕೊಪ್ಪಳ, ತಿರುಪತಿ, ಬೀದರ್ ಮತ್ತು ಇನ್ನಿತರ ಸ್ಥಳಗಳಿಗೆ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ.
ನಿಗಮದ ಅಡಿಯಲ್ಲಿರುವ ಎಲ್ಲಾ ಸ್ಥಳಗಳಿಗೂ ವ್ಯವಸ್ಥೆ ಮಾಡಲಾಗುವುದು ಎಂದು ಕೆ ಎಸ್ ಆರ್ ಟಿ ಸಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/06/ksrtc-bus-stand-1-scaled-e1624343116675.jpg)