ಬೆಂಗಳೂರು:
ಕೆ.ಎಸ್.ಆರ್.ಟಿ.ಸಿ. ಗೆ CMO Asia Brand Excellence Award ಅಂತರರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಇಂದು ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ನಿಗಮದ ಉಪಕ್ರಮವಾದ “ಅಂಬಾರಿ ಡ್ರೀಮ್ ಕ್ಲಾಸ್ – ಕನಸಿನೊಂದಿಗೆ ಪ್ರಯಾಣಿಸಿ” ಎಂಬ ಬ್ರಾಂಡಿಂಗ್ ಗೆ , CMO Asia Brand Excellence Award ಅಂತರರಾಷ್ಟ್ರೀಯ ಪ್ರಶಸ್ತಿ ಲಭಿಸಿರುವ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಅಂಬಾರಿ ಡ್ರೀಮ್ ಕ್ಲಾಸ್ ಬಸ್ಸಿನ ಸಮಗ್ರ ಮಾಹಿತಿಯುಳ್ಳ ಕೈಪಿಡಿಯೊಂದಿಗೆ ಬಸ್ಸಿನ ಸೇವೆ ಮತ್ತು ವಿಶಿಷ್ಟತೆಯನ್ನು ವಿವರಿಸಿದರು.
ಸನ್ಮಾನ್ಯ ಮುಖ್ಯಮಂತ್ರಿ ಅವರು ಸಂತಸ ವ್ಯಕ್ತಪಡಿಸಿ, ಸಮಸ್ತ ಸಾರಿಗೆ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುವುದರೊಂದಿಗೆ, ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ಇನ್ನೂ ಉತ್ತಮ ಸೇವೆ ಕಲ್ಪಿಸಲೆಂದು ಶುಭಾಶಯ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/08/KSRTC-cm-yediyurappa.gif)