ಕುಂದಗೋಳ:
ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರನ್ನು ಗೆಲ್ಲಿಸಿದ ಕುಂದಗೋಳ ವಿಧಾನಸಭೆ ಕ್ಷೇತ್ರದ ಜನರಿಗೆ ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ದಿವಂಗತ ಶಿವಳ್ಳಿ ಅವರು ಮಾಡಿದ್ದ ಜನಪರ ಕೆಲಸಗಳು, ಅವರ ಮೇಲೆ ಕ್ಷೇತ್ರದ ಜನ ಇಟ್ಟಿದ್ದ ಅಗಾಧ ಪ್ರೀತಿ, ಗೌರವ ಅವರ ಪತ್ನಿ ಕುಸುಮಾವತಿ ಶಿವಳ್ಳಿ ಅವರನ್ನು ಗೆಲುವಿನ ದಡ ಮುಟ್ಟಿಸಿದೆ. ಇದಕ್ಕೆ ಕಾರಣಕರ್ತರಾದ ಕ್ಷೇತ್ರದ ಜನರಿಗೆ ತಾವು ಎಂದೆಂದಿಗೂ ಚಿರಋಣಿ ಎಂದು ಕುಂದಗೋಳ ವಿಧಾನಸಭೆ ಕ್ಷೇತ್ರದ ಮರುಚುನಾವಣೆ ಉಸ್ತುವಾರಿ ಹೊತ್ತಿದ್ದ ಸಚಿವ ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದಿವಂಗತ ಶಿವಳ್ಳಿ ಅವರು ಕುಂದಗೋಳ ಕ್ಷೇತ್ರದ ಪ್ರಗತಿಗೆ ಕಂಡಿದ್ದ ಕನಸುಗಳನ್ನು ನನಸು ಮಾಡಲು ಅವರ ಪತ್ನಿ ಹಾಗೂ ತಮ್ಮ ಸಹೋದರಿ ಸಮಾನರಾದ ಕುಸುಮಾವತಿ ಅವರ ಬೆನ್ನಿಗೆ ನಿಂತು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಿವಕುಮಾರ್ ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
