ರಾಮನಗರ :
ಮೂರು ವರ್ಷದ ಮಗುವನ್ನು ಮನೆಯಿಂದ ಎಳೆದೊಯ್ದು ಕೊಂದು ಹಾಕಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲೆಯ ಮಾಗಡಿ ತಾಲ್ಲೂಕಿನ ಕದರಯ್ಯನಪಾಳ್ಯದಲ್ಲಿ ಕಳೆದ ವಾರ ಹೇಮಂತ್ ಎಂಬ 3 ವರ್ಷದ ಮಗು ಮನೆಯಲ್ಲಿ ಪೋಷಕರೊಂದಿಗೆ ಮಲಗಿದ್ದ ವೇಳೆ ಮನೆಯೊಳಗೆ ನುಗ್ಗಿದ ಚಿರತೆ ಎಳೆದುಕೊಂಡು ಹೋಗಿ ಕೊಂದು ಹಾಕಿತ್ತು.
ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದು ಅಲ್ಲಿ ಬೋನ್ ಇಡಲಾಗಿತ್ತು. ಬೋನಿನೊಳಗೆ ಚಿರತೆ ಬಿದ್ದಿದ್ದು, ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
2 ವರ್ಷದ ಗಂಡು ಚಿರತೆ ಇದಾಗಿದ್ದು ಇದೆ ಚಿರತೆ ಮಗುವನ್ನು ಕೊಂದಿರಬಹುದೆಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
