ಉಡುಪಿ :
ರಸ್ತೆ ಕಾರ್ಯದ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ ಆಗುಂಬೆ ಘಾಟ್ ರಸ್ತೆಯಲ್ಲಿ ಇಂದಿನಿಂದ ವಾಹನ ಸಂಚಾರ ಆರಂಭವಾಗಲಿದೆ.
ಮಳೆಗಾಲದಲ್ಲಿ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗವು ಕಾಮಗಾರಿಗೆ ಅವಕಾಶ ನೀಡುವ ಉದ್ದೇಶದಿಂದ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಲಾಗಿತ್ತು. ಈ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.
ಆಗುಂಬೆ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳಾದ ಮಿನಿ ಬಸ್ ಗಳು, ಜೀಪು, ವ್ಯಾನ್, ಕಾರುಗಳು ಮತ್ತು ದ್ವಿಚಕ್ರ ವಾಹನಗಳಿಗೆ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ತಿಳಿಸಿದ್ದಾರೆ.
ಈಗ ಲಘು ವಾಹನಗಳಿಗೆ ಆಗುಂಬೆ ಘಾಟಿಯಲ್ಲಿ ಇಂದಿನಿಂದ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಘನ ವಾಹನಗಳು ಉಡುಪಿ ಸಿದ್ಧಾಪುರ ರಾಜ್ಯ ಹೆದ್ದಾರಿ 52 ಹಾಗೂ ಮಂಗಳೂರು-ಕಾರ್ಕಳ-ಶೃಂಗೇರಿ ಮೂಲಕ ಸಂಚರಿಸುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
