ಹಾಸನ:
ಎಲ್ಕೆಜಿ ವಿದ್ಯಾರ್ಥಿಯ ಮೇಲೆ ಶಿಕ್ಷಕರಿ ಸ್ಕೇಲ್ ನಿಂದ ಹಲ್ಲೆ ನಡೆಸಿದ್ದರಿಂದ ವಿದ್ಯಾರ್ಥಿ ತನ್ನ ಕಣ್ಣು ಕಳೆದುಕೊಂಡ ಘಟನೆ ಜಿಲ್ಲೆಯ ಹೊರವಲಯದ ಎಲ್ವಿಜಿಎಸ್ ಶಾಲೆಯಲ್ಲಿ ನಡೆದಿದೆ.
ಮನಿಷ್ ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿಯಾಗಿದ್ದಾರೆ. ಈತ ಎಲ್ಕೆಜಿಯಲ್ಲಿ ವ್ಯಾಸಂಗ ವಾಡುತ್ತಿದ್ದಾನೆ. ಶಾಲೆಯಲ್ಲಿ ಶಿಕ್ಷಕಿ ಮನಿಷ್ ಕಣ್ಣಿಗೆ ಕಬ್ಬಿಣದ ಸ್ಕೇಲ್ನಿಂದ ಹಲ್ಲೆ ಮಾಡಿದ್ದಾರೆ. ಹೀಗಾಗಿ ನಮ್ಮ ಮಗನಿಗೆ ಕಣ್ಣು ಕಳೆದುಕೊಳ್ಳುವ ಸ್ಥಿತಿ ಬಂದಿದೆ ಎಂದು ಪೋಷಕರು ಶಿಕ್ಷಕಿ ವಿರುದ್ಧ ಆರೋಪಿಸಿದ್ದಾರೆ.
ಶಿಕ್ಷಕಿ ಹಲ್ಲೆ ನಡೆಸಿದ ದಿನದಿಂದ ವಿದ್ಯಾರ್ಥಿ ಕಣ್ಣು ನೋವು ಎಂದು ಹೇಳುತ್ತಿದ್ದನು.ಪೋಷಕರು ವೈದ್ಯರ ಬಳಿ ಕರೆದೊಯ್ದಿದ್ದಾರೆ. ಈ ವೇಳೆ ಮಗು ದೃಷ್ಟಿ ಕಳೆದುಕೊಂಡಿದ್ದು ಗೊತ್ತಾಗಿದೆ. ವೈದ್ಯರು ಹೇಳುವ ಪ್ರಕಾರ ಒಂದು ಕಣ್ಣಿಗೆ ತುಂಬಾಹಾನಿಯಾಗಿದ್ದು ಚೇತರಿಸಿಕೊಳ್ಳುವುದು ತುಂಬ ಕಷ್ಟ ಎಂದು ಹೇಳಿದ್ದಾರೆ.
ಪೋಷಕರು ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಗಸ್ಟ್ 13ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಈ ಸಂಬಂಧ ಪೊಲೀಸರಿಗೆ ಶಿಕ್ಷಕಿ ಹಾಗೂ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಸದ್ಯ ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/08/student-eye-lost.gif)