ರಾಜ್ಯದ್ಯಂತ ‘ಅಗತ್ಯಸೇವೆ’ ಹೊರತುಪಡಿಸಿ ಎಲ್ಲವೂ ಬಂದ್!!

ಬೆಂಗಳೂರು: 

     ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ್ದು,  ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಆಗಲಿದೆ.

     ಈಗಾಗಲೇ ರಾಜ್ಯ ಸರ್ಕಾರದಿಂದ ಕೊರೋನಾ ನಿಯಂತ್ರಣಕ್ಕಾಗಿ ರಾತ್ರಿ ಕರ್ಪ್ಯೂ ಹಾಗೂ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಿ ಆದೇಶಿಸಲಾಗಿತ್ತು. ಈ ವೇಳೆಯಲ್ಲಿ ಅಗತ್ಯಸೇವೆ ಒದಗಿಸುವಂತ ಇಲಾಖೆ ಜೊತೆಗೆ, ಇತರೆ ಸೇವೆ ಒದಗಿಸುವಂತ ಇಲಾಖೆಗಳಿಗೂ ಅವಕಾಶ ನೀಡಲಾಗಿತ್ತು. ಆದರೆ, ಇದೀಗ ಕೊರೋನಾ ನೈಟ್ ಕರ್ಪ್ಯೂ ಹಾಗೂ ವೀಕ್ ಎಂಡ್ ಕರ್ಪ್ಯೂ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಇಂತಹ ಮಾರ್ಗಸೂಚಿಯಲ್ಲಿ ಅಗತ್ಯ ಸೇವೆ ಹೊರತಾಗಿ, ಎಲ್ಲಾ ಶಾಪ್ ಗಳನ್ನು ಮೇ4ರವರೆಗೆ  ಬಂದ್ ಮಾಡುವಂತೆ ಆದೇಶಿಸಲಾಗಿದೆ.

     ಧಾರ್ಮಿಕ ಕ್ಷೇತ್ರಗಳು, ಮೊಬೈಲ್ ಶಾಪ್, ಟಿವಿ, ಎಲೆಕ್ಟ್ರಾನಿಕ್ ಶೋ ರೂಮ್, ಬ್ಯಾಂಗಲ್ಸ್ ಸ್ಟೋರ್, ಚಿನ್ನದ ಅಂಗಡಿ ಬುಕ್ ಶಾಪ್, ಚಪ್ಪಲಿ ಅಂಗಡಿಗಳು, ಫ್ಯಾನ್ಸಿ ಸ್ಟೋರ್, ಬಟ್ಟೆ ಅಂಗಡಿಗಳು ಸೇರಿ ಎಲ್ಲವನ್ನೂ ಬಂದ್ ಮಾಡಬೇಕಿದೆ.

      ಹೋಟೆಲ್ , ರೆಸ್ಟೋರೆಂಟ್, ಬಾರ್ ಗಳಲ್ಲಿ ಪಾರ್ಸಲ್ ತರಲಷ್ಟೇ ಅವಕಾಶವಿದೆ. ಆಟೋ, ಬಸ್, ಮೆಟ್ರೋ ಸೇವೆಗಳು ಲಭ್ಯವಾಗಲಿದೆ.

     ಬ್ಯಾಂಕ್, ಎಟಿಎಂ, ಇನ್ಶ್ಯೂರೆನ್ಸ್ ಕಂಪನಿ, ಪೇಪರ್, ಟಿವಿ ಸೇರಿದಂತೆ ವಿವಿಧ ಮೀಡಿಯಾ ಸಂಸ್ಥೆಗಳು, ಇ-ಕಾಮರ್ಸ್ ಸೇವೆ, ಕಾಸಗಿ ಸೆಕ್ಯೂರಿಟಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ಗಳಿಗೆ ಅನುಮತಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap