ದಾವಣಗೆರೆ : ಬೈಕ್’ಗೆ ಲಾರಿ ಡಿಕ್ಕಿ ; ದಂಪತಿಗಳಿಬ್ಬರ ದುರ್ಮರಣ!!

ದಾವಣಗೆರೆ : 

      ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ದಂಪತಿ ದುರ್ಮರಣಕ್ಕೀಡಾಗಿರುವ ಘಟನೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಹೊಸ ವರ್ಷದ ಮೊದಲ ದಿನವೇ  

       ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಒಡೆಯರರಾಯನಹಳ್ಳಿಯ ಸಿದ್ದಮ್ಮ(45) ಮತ್ತು ಹಾಲೇಶಪ್ಪ(52) ಮೃತ ದಂಪತಿಗಳು. 

       ದಂಪತಿ ರಾಜನಹಳ್ಳಿಯ 22 ಕೆರೆ ಏತನೀರಾವರಿ ಸಮೀಪದ ಸೇತುವೆ ಮೇಲೆ ಬೈಕ್ ನಲ್ಲಿ ರಾಣೆಬೆನ್ನೂರಿಗೆ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದಿದೆ.  ಪರಿಣಾಮ ಸೇತುವೆ ಮೇಲಿಂದ ಕೆಳಗೆ ಬಿದ್ದು ಸಿದ್ದಮ್ಮ(45) ಪ್ರಾಣಬಿಟ್ಟರು. ತಲೆಗೆ ಪೆಟ್ಟಾಗಿ ಹಾಲೇಶಪ್ಪ(52) ಕೂಡ ಸ್ಥಳದಲ್ಲೇ ಕೊನೆಯುಸಿರೆಳೆದರು.

       ಅಪಘಾತದಿಂದಾಗಿ ಬೈಕ್​ ನಜ್ಜುಗುಜ್ಜಾಗಿತ್ತು. ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಈ ಸಂಬಂಧ ಹರಿಹರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap