ಕಲಬುರ್ಗಿ :
ಬಸ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬಸ್ ಚಾಲಕ ಹಾಗೂ ನಿರ್ವಾಹಕ ಸೇರಿ 7 ಮಂದಿ ಪ್ರಯಾಣಿಕರು ಗಾಯಗೊಂಡಿರುವ ದುರ್ಘಟನೆ ವಾಡಿ ಸಮೀಪದ ರೇವೂರ್ ಗ್ರಾಮದ ಬಳಿ ನಡೆದಿದೆ.
ಸಾರಿಗೆ ಸಂಸ್ಥೆಯ ಬಸ್ ಜೇವರ್ಗಿಯಿಂದ ಚಿತ್ತಾಪುರ ಕಡೆಗೆ ಹೊರಟ್ಟಿತ್ತು. ಈ ವೇಳೆ ಎದುರುಗಡೆಯಿಂದ ಪರಸಿ ಕಲ್ಲುಗಳನ್ನು ತುಂಬಿಕೊಂಡ ಲಾರಿಯ ಟೈರ್ ಏಕಾಏಕಿ ಸಿಡದ ಪರಿಣಾಮ ಲಾರಿ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಸ್ನಲ್ಲಿ 25 ರಿಂದ 30 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಮುಂದಿನ ಸೀಟ್ನಲ್ಲಿದ್ದ ಬಸ್ ನಿರ್ವಾಹಕ, ಚಾಲಕ ಹಾಗೂ ಐವರು ಪ್ರಯಾಣಿಕರಿಗೆ ಹೆಚ್ಚು ಗಾಯಗಲಾಗಿದ್ದು, ಉಳಿದವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.ಗಾಯಾಳುಗಳನ್ನು ಚಿತ್ತಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿ ಗುದ್ದಿದ ರಭಸಕ್ಕೆ ಎರಡೂ ವಾಹನಗಳ ಮುಂಭಾಗ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಸಂಬಂಧ ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2021/02/Bus-accident-kalburgi.jpg)