ಹಿರಿಯೂರು :
ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಬಂದ ಪೇಂಟ್ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಲಾರಿ ಹೊತ್ತು ಉರಿದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ – ಗೋರಲಡುಕು ಸಮೀಪದ ಓಂ ಶಕ್ತಿ ಹೋಟೆಲ್ ಹತ್ತಿರ ರಾಷ್ಟ್ರೀಯ ಹೆದ್ದಾರಿ ಬಳಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಲಾರಿಯಲ್ಲಿ ಏಷಿಯನ್ ಪೇಂಟ್ಸ್ ಕಂಪನಿಗೆ ಸೇರಿದ್ದ ಪೇಂಟ್ ಡಬ್ಬಗಳಿದ್ದು, ಅಪಾರ ಪ್ರಮಾಣದ ಪೇಂಟ್ ಹಾನಿಯಾಗಿದೆ.
ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಏಷಿಯನ್ ಪೇಂಟ್ ತುಂಬಿಕೊಂಡಿದ್ದ ಲಾರಿ ಹೋಗುತ್ತಿತ್ತು ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಬೆಂಕಿ ಹೊತ್ತುಕೊಂಡಿದೆ. ಪೇಂಟ್ ಬಾಕ್ಸ್ ಗಳು ರಸ್ತೆಯಲ್ಲಿ ಬಿದ್ದಿವೆ.
ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆ ನಂತರ ಲಾರಿ ಹೊತ್ತಿ ಉರಿಯುತ್ತಿದ್ದಂತೆ ಲಾರಿ ಚಾಲಕ ಅದರಿಂದ ಜಿಗಿದು ಪಾರಾಗಿದ್ದಾನೆ. ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/10/Lorry-accident-fire.jpg)