ಉಡುಪಿ : ಎರಡು ಲಾರಿಗಳ ರಸ್ತೆ ಅಪಘಾತದಲ್ಲಿ ಚಾಲಕ ಸಾವು!

ಕಾಪು :

      ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕಾಪುವಿನ ಸಮೀಪ ಉಚ್ಚಿಲದಲ್ಲಿ ನಡೆದಿದೆ.

      ಇಂದು ಮುಂಜಾನೆ 4:30 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಹುಬ್ಬಳ್ಳಿಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಸೀದಿ ಬಳಿ ಕೆಟ್ಟು ನಿಂತಿತ್ತು. ಲಾರಿ ಚಾಲಕ ಕಲಘಟಗಿ ನಿವಾಸಿ ಮಹಾಂತೇಶ್ ಗೌಲಿ (33) ಎಂಬುವವರು ಲಾರಿ ಕೆಳಗಡೆ ಮಲಗಿ ರಿಪೇರಿ ಮಾಡುತ್ತಿದ್ದರು. ಇದೇ ವೇಳೆ ಉಡುಪಿ ಕಡೆಯಿಂದ ಮಂಗಳೂರಿನತ್ತ ಅದೇ ದಾರಿಯಾಗಿ ಬರುತ್ತಿದ್ದ ಲಾರಿಯು ಕೆಟ್ಟು ನಿಂತ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ.

      ಈ ವೇಳೆ ಲಾರಿ ರಿಪೇರಿ ಮಾಡುತ್ತಿದ್ದ ಹುಬ್ಬಳ್ಳಿ ಮೂಲದ ಚಾಲಕ ಮಹಂತೇಶ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೇ ವೇಳೆ ಇನ್ನೊಂದು ಲಾರಿ ಚಾಲಕ ಸಹ ಗಾಯಗೊಂಡಿದ್ದಾಗಿ ಪೋಲೀಸ್ ಮೂಲಗಳು ಹೇಳಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap