ಪ್ರೀತಿ ನಿರಾಕರಿಸಿದಳೆಂದು SSLC ವಿದ್ಯಾರ್ಥಿಯನ್ನು ಕೊಚ್ಚಿ ಕೊಂದ ಪಾಪಿ !!!

ಬೆಂಗಳೂರು: 

      ಭಗ್ನ ಪ್ರೇಮಿವೋರ್ವ ತನ್ನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ವಿದ್ಯಾರ್ಥಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಇಂದು ನಗರದಲ್ಲಿ ನಡೆದಿದೆ.

      ದೊಡ್ಡಬಳ್ಳಾಪುರದ ಬಸವೇಶ್ವರನಗರದ​​ ನಿವಾಸಿಯಾಗಿರುವ ಕೀರ್ತನಾ(16) ಮೃತ ದುರ್ದೈವಿ. ಆರೋಪಿ ನವೀನ್ ಮೃತ ಹುಡುಗಿಯ ಸೋದರ ಮಾವನಾಗಿದ್ದು, ಈತನಿಂದಲೇ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ.

      ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದಾಗ ವಿದ್ಯಾರ್ಥಿನಿಯನ್ನು ಹಿಂಬಾಲಿಸಿದ ನವೀನ್ ಗಂಗಾಧರಪುರ ಬಳಿ ಮಚ್ಚಿನಿಂದ ಹತ್ಯೆಗೈದು   ತಕ್ಷಣ ಪರಾರಿಯಾಗಿದ್ದಾನೆ ಎನ್ನಲಾಗಿದೆ.  ರಕ್ತದ ಮಡುವಿನಲ್ಲಿ ಬಿದ್ದಿದ್ದ ಕೀರ್ತನಾಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಲು ಕೊಂಡೊಯ್ಯದರಾದರೂ ಅಷ್ಟರಲ್ಲಿ ಆಕೆ ಅಸುನೀಗಿದ್ದಳು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

      ಹಾಡಹಗಲೇ ನಡೆದ ಈ ಘಟನೆಯಿಂದ ನಗರದಜನರು ಬೆಚ್ಚಿಬಿದ್ದಿದ್ದು, ಸಹಪಾಠಿಗಳು ಮತ್ತು ಶಾಲೆಯ ಶಿಕ್ಷಕರು ಆತಂಕಗೊಂಡಿದ್ದಾರೆ. ತನ್ನನ್ನು ಪ್ರೀತಿಸುವಂತೆ ಆರೋಪಿ ನವೀನ್​ ಅಪ್ರಾಪ್ತೆಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಈ ಹಿಂದೆ ಎರಡು ಬಾರಿ ಹುಡುಗಿಯ ಪೋಷಕರು ಆತನಿಗೆ ಬುದ್ಧಿವಾದ ಹೇಳಿದ್ದರಂತೆ. 

      ಘಟನಾ ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿದ್ದು, ಈ ಸಂಬಂಧ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap