ಸುಳ್ಯ :
ಸುಳ್ಯ ನಗರದ ವಸತಿಗೃಹವೊಂದರಲ್ಲಿ ಯುವಕ ಮತ್ತು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಸುಳ್ಯ ತಾಲೂಕಿನ ಕಟ್ಟತ್ತಾರು ನಿವಾಸಿ ದರ್ಶನ್(19) ಹಾಗೂ ಧರ್ಮಸ್ಥಳ ಸಮೀದ ಕಾಯರ್ತ್ಕಡ್ಕದ ಇಂದಿರಾ (19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಇವರಿಬ್ಬರೂ ಅ.18ರಂದು ರಾತ್ರಿ ಸುಳ್ಯದ ವಸತಿ ಗೃಹಕ್ಕೆ ಸಂಬಂಧಿಕರು ಎಂದು ಹೇಳಿಕೊಂಡು ಬಂದು ಊರಿಗೆ ಹೊರಡಲು ಬಸ್ ಇಲ್ಲ ಎಂದು ವಸತಿ ಗೃಹದಲ್ಲಿ ರೂಂ ಪಡೆದುಕೊಂಡಿದ್ದರು. ಆನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅ. 19 ರಂದು ಮಧ್ಯಾಹ್ನ ವೇಳೆಗೆ ವಸತಿಗೃಹದ ಮೇನೇಜರ್ ರೂಮ್ ಬಳಿ ಹೋಗಿ ಕಿಟಕಿ ಬಳಿ ಬಂದು ಇಣುಕಿ ನೋಡಿದಾಗ ಆತ್ಮಹತ್ಯೆ ಪ್ರಕರಣ ಬಯಲಾಗಿದ್ದು ಒಂದೇ ನೇಣಿಗೆ ಇಬ್ಬರು ಕೊರಳೊಡ್ಡಿದ್ದಾರೆ ಎನ್ನಲಾಗಿದೆ.
ಇವರ ಪ್ರೀತಿಗೆ ಮನೆಯವರ ವಿರೋಧ ಇತ್ತೆಂದು ಹೇಳಲಾಗಿದ್ದು ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಯುವಕ ದರ್ಶನ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದು, ಇದೇ ಲಾಡ್ಜ್ ನಲ್ಲೂ ಈ ಹಿಂದೆ ಕೆಲ ಅವಧಿ ಕೆಲಸ ಮಾಡಿದ್ದ ಎಂದು ತಿಳಿದುಬಂದಿದೆ. ಮನೆಯಲ್ಲಿ, ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೊರಟಿದ್ದ. ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ತಕ್ಷಣವೇ ವಸತಿ ಗೃಹದವರು ಪೊಲೀಸರಿಗೆ ದೂರು ನೀಡಿದ್ದರು. ಸುಳ್ಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
