ಮಡಿಕೇರಿ : ಹೋಂಸ್ಟೇ, ರೆಸಾರ್ಟ್‌, ಲಾಡ್ಜ್‌ ಬಂದ್!!!

ಮಡಿಕೇರಿ:

      ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಹೋಂಸ್ಟೇ, ರೆಸಾರ್ಟ್, ಲಾಡ್ಜ್ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

      ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ಕೊಟ್ಟಿರುವುದರಿಂದ ಕೊರೊನಾ ಸೋಂಕು ಹೆಚ್ಚುತ್ತಿದ್ದು ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡಿದ ಘಟನೆ ಸೋಮವಾರಪೇಟೆ ತಾಲೂಕಿನ ಬೆಟ್ಟದಳ್ಳಿ ಹಾಗೂ ಶಾಂತಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

     ನಗರ ಪ್ರದೇಶದಲ್ಲಿದ್ದ ಸೋಂಕು ಈಗ ಗ್ರಾಮೀಣ ಭಾಗದಲ್ಲೂ ವ್ಯಾಪಕವಾಗಿ ಹರಡುತ್ತಿದೆ. ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಮಲ್ಲಳ್ಳಿ ಜಲಪಾತ ವೀಕ್ಷಿಸುವ, ಬೆಟ್ಟದ ಮೇಲೆ ಟ್ರೆಕ್ಕಿಂಗ್‌ ಮಾಡುವ ನೆಪದಲ್ಲಿ ರೆಸಾರ್ಟ್‌ಗಳಲ್ಲಿ ಪ್ರವಾಸಿಗರು ಮೋಜು-ಮಸ್ತಿ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

      ಇನ್ನು ಜಿಲ್ಲೆಯಲ್ಲಿ ಒಟ್ಟು 92 ಮಂದಿಗೆ ಸೋಂಕು ದೃಢಪಟ್ಟಿದೆ. ಅವರಲ್ಲಿ 10 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap