ಮೈಸೂರು :
ಸಂಸದ ಪ್ರತಾಪ್ ಸಿಂಹ ಪೇಪರ್ ಲೈಯನ್, ನರಿ, ಉಗ್ರಗಾಮಿ ಎಂದು ಪ್ರತಾಪ್ ಸಿಂಹ ವಿರುದ್ಧ ಪ್ರೊ.ಮಹೇಶ್ ಚಂದ್ರ ಗುರು ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಪೇಪರ್ ಲಯನ್, ನರಿ, ಉಗ್ರಗಾಮಿ. ಅಭಿವೃದ್ಧಿ ಮಾಡಿದ್ದೇನೆ ಎಂದು ಬ್ರೌಸರ್ ಹಿಡಿದು ಓಡಾಡುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಕೊಡುಗೆ ಇಲ್ಲ.
ಇಂತಹ ಅವರಿಗೆ ಮತ ಹಾಕ ಬೇಕಾ ಎಂದು ಪ್ರಶ್ನೆ ಮಾಡುವ ಮೂಲಕ ಈ ಬಾರಿ ಚುನಾವಣೆಯಲ್ಲಿ ಇಂತಹವರು ಗೆಲ್ಲಬಾರದು ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
